ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,158 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಅವರು ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ತಮಗೆ ಬಂದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು ಈ ಮಾಹಿತಿಯನ್ನು ನೀಡಿದ್ದಾರೆ.
ಕೊರೋನಾ ಅವಧಿಯಲ್ಲಿ 6 ಸಾವಿರಕ್ಕೂ ಅಧಿಕ ವೈದ್ಯರು, ತಜ್ಞ ವೈದ್ಯರು, ಸಿಬ್ಬಂದಿಗಳನ್ನು 6 ತಿಂಗಳ ಅವಧಿಗೆ ನೇಮಕ ಮಾಡಲಾಗಿದೆ. ಇದರೊಂದಿಗೆ 1246 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಸೇರಿದಂತೆ 2158 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, ಜ. 15 ರೊಳಗಾಗಿ ಈ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಕೊರೋನಾ ಅವಧಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ನಿಯೋಜಿಸಿರುವ ಸಿಬ್ಬಂದಿಗಳನ್ನು ಮುಂದಿನ ಆರು ತಿಂಗಳ ಅವಧಿಗೆ ಮುಂದುವರಿಸಲು ಸರ್ಕಾರ ಸಿದ್ಧವಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಈ ವರ್ಷದಲ್ಲಿ ಮಡಿದ ಗಣ್ಯರಿಗೆ ಗೌರವ ಸಮರ್ಪಿಸಿ, ಮೌನಾಚರಣೆ ನಡೆಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.