ಕೋಲ್ಕತಾ: ಪಶ್ಚಿಮಬಂಗಾಳದ ಸಿಲಿಗುರಿಯಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಸೋಮವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ನಡೆಸಿದ ಬಲಪ್ರಯೊಗದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ. ಈ ಸಾವಿಗೆ ಸಂಬಂಧಿಸಿದಂತೆ ಬಿಜೆಪಿ ಮಂಗಳವಾರ ಉತ್ತರ ಬಂಗಾಳದಲ್ಲಿ 12 ಗಂಟೆಗಳ ಬಂದ್ಗೆ ಕರೆ ನೀಡಿದೆ.
ಪೊಲೀಸ್ ಲಾಠಿ ಚಾರ್ಜ್ನಿಂದಾಗಿ ಪಕ್ಷದ ಬೆಂಬಲಿಗರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬಿಜೆಪಿ ಸೋಮವಾರ ಹೇಳಿಕೊಂಡಿದೆ. ಇತರ 40 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮಬಂಗಾಳ ಬಿಜೆಪಿ ಮಂಗಳವಾರ ಉತ್ತರ ಬಂಗಾಳದಲ್ಲಿ 12 ಗಂಟೆಗಳ ಬಂದ್ಗೆ ಕರೆ ನೀಡಿತು.
ಪ್ರತಿಭಟನೆಯ ಸಂದರ್ಭದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತನನ್ನು ಉಲೆನ್ ರಾಯ್ ಎಂದು ಗುರುತಿಸಲಾಗಿದೆ. ಇವರ ಸಾವಿಗೆ ನಿಖರ ಕಾರಣ ಮರಣೋತ್ತರ ವರದಿಯ ಬಳಿಕ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.
“ಬಿಜೆಪಿ ಕಾರ್ಯಕರ್ತ ಉಲೆನ್ ರಾಯ್ ಪೊಲೀಸ್ ಲಾಠಿಚಾರ್ಜ್ನಿಂದಾಗಿ ಸಾವನ್ನಪ್ಪಿದ್ದಾರೆ. ಅವರು ಉತ್ತರ ಬಂಗಾಳದ ಅಭಿವೃದ್ಧಿಗೆ ಒತ್ತಾಯಿಸುತ್ತಿದ್ದರು. ಬಂಗಾಳದ ಗೃಹ ಸಚಿವರಾಗಿರುವ ಪಿಶಿ ಈ ಸಾವಿಗೆ ನೇರವಾಗಿ ಕಾರಣರಾಗಿದ್ದಾರೆ. ಪಿಶಿ ಟಿಎಂಸಿಯ ಅನ್ಯಾಯವನ್ನು ವಿರೋಧಿಸುವವರನ್ನು ಗುರಿಯಾಗಿಸುತ್ತಿದ್ದಾರೆ” ಎಂದು ಬಿಜೆಪಿ ಟ್ವಿಟ್ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.