ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಯ ಆಶಯಕ್ಕೆ ಬದ್ಧವಾಗಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದೆ. ಆದರೆ ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರ ನಡೆಸುವ ಮೂಲಕ ಬಿಜೆಪಿ ವಿರುದ್ಧ ಜನರನ್ನು ಎತ್ತಿ ಕಟ್ಟುವ ಪ್ರಯತ್ನ ನಡೆಸುತ್ತಿವೆ ಎಂದು ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಹಿಂದೆ ವಿರೋಧ ಪಕ್ಷಗಳು ಬೆಂಬಲಿಸಿದ್ದ ಕೃಷಿ ಸುಧಾರಣೆಗಳನ್ನೇ ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈಗ ಬಿಜೆಪಿ ಸರ್ಕಾರ ಅವುಗಳನ್ನು ಜಾರಿಗೆ ತಂದಿದೆ ಎಂಬ ಒಂದೇ ಕಾರಣದಿಂದ ವಿರೋಧಿಸುವ, ಪ್ರತಿಭಟನೆ ನಡೆಸುವ ವಿಪಕ್ಷಗಳ ಈ ಕ್ರಮ ರಾಜಕೀಯ ಪ್ರೇರಿತವೇ ಸರಿ ಎಂದು ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್, ಡಿಎಂಕೆ, ಎಎಪಿ ಸೇರಿದಂತೆ ಇನ್ನೂ ಕೆಲವು ಪಕ್ಷಗಳು ಚುನಾವಣಾ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ಈ ಕಾಯ್ದೆಗಳನ್ನು ಜಾರಿಗೊಳಿಸುವ ಭರವಸೆಯನ್ನು ನೀಡಿದ್ದರು. ಈಗ ಅದೇ ಕಾಯ್ದೆಗಳನ್ನು ವಿರೋಧಿಸುತ್ತಿದ್ದಾರೆ ಎಂದು ಸುಧಾಕರ್ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಜನರನ್ನು ತಲುಪುತ್ತಿರುವ ವೇಗ ಮತ್ತು ವಿಪಕ್ಷಗಳು ಅನುಭವಿಸಿರುವ ಸಾಲು ಸಾಲು ಸೋಲಿನ ಪರಿಣಾಮ ವಿರೋಧಿಗಳಲ್ಲಿ ಹತಾಶೆ ಉದ್ಭವವಾಗಿದೆ. ಇದರಿಂದ ಜನರನ್ನು ಎತ್ತಿ ಕಟ್ಟುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಗಳು ವಿಸ್ತಾರವಾದ ಮಾರುಕಟ್ಟೆ ಒದಗಿಸಿ, ಅನ್ನದಾತರ ಆದಾಯ ಹೆಚ್ಚಿಸಲಿದೆ. ಕೃಷಿ ವ್ಯವಸ್ಥೆಯ ಈಗಿರುವ ಕಾಯ್ದೆಗಳು ಮುಂದುವರೆಯಲಿವೆ ಎಂದು ಅವರು ತಿಳಿಸಿದ್ದಾರೆ.
ಈ ಹಿಂದೇ ತಾವೇ ಬೆಂಬಲಿಸಿದ್ದ ಸುಧಾರಣೆಗಳ್ನು ಈಗ ವಿನಾಕಾರಣ ವಿರೋಧಿಸುತ್ತಿರುವ ವಿಪಕ್ಷಗಳ ನಡೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಸರ್ಕಾರ ರೈತರ ಹಿತಾಸಕ್ತಿ ಕಾಪಾಡಲು ಕಟಿಬದ್ಧವಾಗಿದ್ದು ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ. (4/4)#FarmersWithModi pic.twitter.com/dAr0MdSyaY
— Dr Sudhakar K (@mla_sudhakar) December 8, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.