ಬೆಂಗಳೂರು: ಕೃಷಿ ಸುಧಾರಣಾ ನೀತಿಗಳನ್ನು ವಿರೋಧಿಸಿ ದೇಶದಾದ್ಯಂತ ನಡೆಯುತ್ತಿರುವ ಬಂದ್ಗೆ ಬಿಜೆಪಿಯ ವಿರೋಧವಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಕೃಷಿ ಕ್ಷೇತ್ರದ ಅಭಿವೃದ್ಧಿಯ ಆಶಯದ ಜೊತೆಗೆ ಈ ನೂತನ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯೂ ಮುಂದುವರಿಯಲಿದೆ. ಅದರಂತೆ ಇದು ರೈತರ ಆದಾಯ ಹೆಚ್ಚಳಕ್ಕೂ ಪೂರಕವಾಗಲಿದೆ. ಪ್ರತಿಪಕ್ಷಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ಕಾಯ್ದೆಗಳನ್ನು ವಿರೋಧಿಸುವ ಕೆಲಸ ಮಾಡುತ್ತಿವೆ ಎಂದು ತಿಳಿಸಿದ್ದಾರೆ.
ರೈತರ ಅಭಿವೃದ್ಧಿಗೆ ಮಾರಕವಾದ ವಿರೋಧ ಪಕ್ಷಗಳ ಈ ನಡೆಯನ್ನು ಒಪ್ಪಲಾಗದು. ವಿಪಕ್ಷಗಳ ಇಂತಹ ಹೀನ ನಿಲುವುಗಳ ವಿರುದ್ಧ ಬಿಜೆಪಿ ಜನಜಾಗೃತಿ ಮೂಡಿಸಲಿದೆ. ಈ ಕಾಯ್ದೆ ರೈತರಿಗೆ ಹೆಚ್ಚು ಅವಕಾಶ, ಆಯ್ಕೆ, ಆದಾಯ ಹೆಚ್ಚಿಸಲಿವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.