ಬೆಂಗಳೂರು: ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಪರಿಷತ್ನಲ್ಲಿ ಅಂಗೀಕಾರ ದೊರೆತಿದೆ.
ಈ ಕಾಯ್ದೆಗೆ ಪ್ರಾದೇಶಿಕ ಪಕ್ಷ ಜೆಡಿಎಸ್ ಸಹ ಬೆಂಬಲ ನೀಡಿದ್ದು, ಆ ಮೂಲಕ ವಿಧೇಯಕ ಅಂಗೀಕಾರವಾಗಿದೆ. ಈ ಹಿಂದೆ ಜೆಡಿಎಸ್ ಸೇರಿದಂತೆ ವಿರೋಧ ಪಕ್ಷಗಳು ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದವು. ಅಲ್ಲದೆ ಈ ಸಂಬಂಧ ಅಧಿವೇಶನದಲ್ಲಿ ಸರ್ಕಾರ ಕಾಯ್ದೆ ತಿದ್ದುಪಡಿ ವಿಚಾರವನ್ನು ಪ್ರಸ್ತಾಪ ಮಾಡಿದಾಗೆಲ್ಲಾ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು.
ಸದ್ಯ ಈ ಹಿಂದೆ ವಿರೋಧ ವ್ಯಕ್ತಪಡಿಸುತ್ತಿದ್ದ ಜೆಡಿಎಸ್ ಈ ಕಾಯ್ದೆಗೆ ಬೆಂಬಲ ಸೂಚಿಸಿರುವ ವಿಚಾರವನ್ನು ಆಡಳಿತಾರೂಢ ಬಿಜೆಪಿ ಸ್ವಾಗತಿಸಿದೆ. ಈ ವಿಧೇಯಕದ ಪರ 37, ವಿರೋಧ 21 ಮತಗಳು ಚಲಾವಣೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಮಸೂದೆಗೆ ಈ ಹಿಂದೆ ವಿಧಾನ ಸಭೆಯಲ್ಲಿಯೂ ಅಂಗೀಕಾರ ದೊರೆತಿತ್ತು. ಇದೀಗ ವಿಧಾನ ಪರಿಷತ್ತಿನಲ್ಲಿಯೂ ಅಂಗೀಕಾರ ಪಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.