ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟ, ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೋರಾಟ ನಡೆಸುತ್ತಿದೆ. ಸರ್ಕಾರದ ಈ ಹೋರಾಟದಲ್ಲಿ ಸರ್ಕಾರದ ಜೊತೆಗೆ ಸಾರ್ವಜನಿಕರು ಸಹ ಕೈಜೋಡಿಸಬೇಕು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್ನ ನಾಯಕ ಈಶ್ವರ ಖಂಡ್ರೆ ಅವರು ಪ್ರಶ್ನೋತ್ತರ ಅವಧಿಯಲ್ಲಿ ಪ್ರಸ್ತಾಪ ಎತ್ತಿದರು. ರಾಜ್ಯದಲ್ಲಿ ಡ್ರಗ್ಸ್ ವ್ಯವಹಾರ ಅವ್ಯಾಹತವಾಗಿ ನಡೆಯುತ್ತಿದೆ. ಡ್ರಗ್ಸ್ ನಿಯಂತ್ರಣ ಕಾಯ್ದೆಯಡಿಯಲ್ಲಿ ಈವರೆಗೆ ಎಷ್ಟು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಬೊಮ್ಮಾಯಿ, ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಹಿನ್ನೆಲೆಯಲ್ಲಿ ಎನ್ಡಿಪಿಎಸ್ ಕಾಯ್ದೆಗೆ ಮತ್ತಷ್ಟು ಬಲ ತುಂಬಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಕಾಯ್ದೆಯಲ್ಲಿ ತಿದ್ದುಪಡಿಯನ್ನು ಸಹ ತರವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ಈ ಪ್ರಕ್ರಿಯೆ ಸದ್ಯ ಪ್ರಗತಿಯಲ್ಲಿದೆ ಎಂದು ಅವರು ಮಾಹಿತಿ ನೀಡಿದರು.
ಶಾಲೆ, ಕಾಲೇಜು ಮತ್ತು ವಿವಿಗಳಲ್ಲಿ ಮಾದಕ ವಸ್ತುಗಳನ್ನು ಸಾಗಾಟ, ಬಳಕೆ ತಡೆಯಲು ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡಂತೆ ಸಮಿತಿ ರಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು. ಹಾಗೆಯೇ ಇಂತಹ ವಿಚಾರಗಳು ಕಂಡುಬಂದಲ್ಲಿ ಅವರನ್ನು ಬಂಧಿಸುವ ಅಧಿಕಾರವನ್ನು ಸಹ ಪೊಲೀಸ್ ಇಲಾಖೆಗೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇನ್ನು ಇಂತಹ ಪ್ರಕರಣಗಳಲ್ಲಿ ಭಾಗಿಯಾದರೆ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಅವರು ಹೇಳಿದ್ದಾರೆ. ಅದರಂತೆ ಡ್ರಗ್ ಪ್ರಕರಣಗಳ ತನಿಖೆ ಚುರುಕುಗೊಳಿಸುವ ಹಿನ್ನೆಲೆಯಲ್ಲಿ ನಾರ್ಕೋಟಿಕ್ ಲ್ಯಾಬ್ಗಳನ್ನು ಹೆಚ್ಚಿಸುವುದಾಗಿಯೂ ಗೃಹ ಸಚಿವರು ಮಾಹಿತಿ ನೀಡಿದ್ದಾರೆ. ಸಿಂಥೆಟಿಕ್ ಡ್ರಗ್ಸ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದರ ವಿರುದ್ಧ ಸಹ ಕಾರ್ಯಾಚರಣೆ ಚುರುಕು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಈ ವರ್ಷ ಕರ್ನಾಟಕದಲ್ಲಿ 5,049 ಎಲ್ಎಸ್ಡಿ ಸ್ಟ್ರಿಫ್ ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.