ಬೆಂಗಳೂರು: ರಾಜ್ಯದಲ್ಲಿ ಬಹುನಿರೀಕ್ಷಿತ ಗೋ ಹತ್ಯೆ ನಿಷೇಧ ಕಾಯ್ದೆ ವಿಧೇಯಕವನ್ನು ನಿನ್ನೆಯಷ್ಟೇ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಂಡನೆ ಮಾಡಿದೆ. ಸರ್ಕಾರ ಮತ್ತು ಪ್ರತಿಪಕ್ಷಗಳ ಪರ ವಿರೋಧದ ನಡುವೆ ಧ್ವನಿ ಮತದ ಮೂಲಕ ಈ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಈ ಸಂದರ್ಭದಲ್ಲಿ ಅಧಿವೇಶನದಲ್ಲಿ ದೇಶಭಕ್ತಿಯ ಘೋಷಣೆ, ವಿಧೇಯಕ ಮಂಡನೆಯ ಸಂದರ್ಭದಲ್ಲಿ ಬಿಜೆಪಿ ನಾಯಕರಿಂದ ವಿಧಾನಸೌಧದ ಹೊರ ಭಾಗದಲ್ಲಿ ಗೋ ಪೂಜೆ ನಡೆಸಲಾಯಿತು. ಆ ಮೂಲಕ ಅವುಗಳಿಗೆ ಗೌರವ ಸಲ್ಲಿಸಲಾಯಿತು. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಗೋ ಹತ್ಯೆ ನಿಷೇಧ ವಿಧೇಯಕ ಮಂಡನೆಯನ್ನು ಹಲವು ಮಂದಿ ಗಣ್ಯರು ಸ್ವಾಗತಿಸಿದ್ದಾರೆ.
ಗೋ ಹತ್ಯೆ ನಿಷೇಧ ವಿಧೇಯಕ ಅಂಗೀಕಾರವನ್ನು ಸ್ವಾಗತಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಸನ್ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಸದನದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ (2020) ವನ್ನು ಮಂಡಿಸಿ ಅಂಗೀಕಾರ ಪಡೆದಿದೆ. ಸರ್ಕಾರಕ್ಕೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರ ನೇತೃತ್ವದ ಬಿಜೆಪಿ ಸರ್ಕಾರ ಸದನದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ (2020) ವನ್ನು ಮಂಡಿಸಿ ಅಂಗೀಕಾರ ಪಡೆದಿದೆ. ಸರ್ಕಾರಕ್ಕೆ ಅಭಿನಂದನೆಗಳು.
ಶ್ರೀ @nalinkateel
ಬಿಜೆಪಿ ರಾಜ್ಯಾಧ್ಯಕ್ಷರು pic.twitter.com/s8impYsdhO— BJP Karnataka (@BJP4Karnataka) December 9, 2020
ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಡಾ ಕೆ ಸುಧಾಕರ್, ದುಡಿ ದುಡಿದು ಮುದಿಯಾದ ಗೋಗಳನ್ನು ಮಾರಿ ಪಾಪಿಯಾಗಲು ಬೇಡ, ಕೆನ್ನೀರು ಚೂರಿ ಕತ್ತಿಗಳ ಕಂಡಗೋ ಶಪಿಸದೇ ನಿನ್ನ? ವಿಷವಾಗದೇ ಪಾಪಿ, ನೀನುಣುವ ಹಾಲನ್ನ ಎಂಬ ರಾಷ್ಟ್ರಕವಿ ಕುವೆಂಪು ಅವರ ಸಾಲನ್ನು ನೆನಪಿಸಿಕೊಂಡು, ಜನರ ಅಪೇಕ್ಷೆಯಂತೆ ಗೋಹತ್ಯೆ ನಿಷೇಧ ವಿಧೇಯಕವನ್ನು ಮಂಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಇನ್ನು ಶಾಸಕ ರಾಜೇಶ್ ನಾಯ್ಕ್ ಯು ಅವರು ಟ್ವೀಟ್ ಮಾಡಿದ್ದು, ವಿಧಾನಸಭಾ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡನೆ, ರಾಜ್ಯದ ಜನರ ಅಪೇಕ್ಷೆಯನ್ನು ನೆರವೇರಿಸುವತ್ತ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಎಂದು ತಿಳಿಸುವ ಮೂಲಕ ಈ ಕಾಯ್ದೆಯನ್ನು ಸ್ವಾಗತಿಸಿದ್ದಾರೆ.
ವಿಧಾನಸಭೆಯ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡನೆ.
ರಾಜ್ಯದ ಜನತೆಯ ಅಪೇಕ್ಷೆಯನ್ನು ನೆರವೇರಿಸುವತ್ತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರ ನೇತೃತ್ವದ ಬಿಜೆಪಿ ಸರ್ಕಾರ.#ಗೋಹತ್ಯೆನಿಷೇಧ pic.twitter.com/jZ7Xgg0SuP
— Rajesh Naik U (@URajeshNaik) December 9, 2020
ಗೋ ಹತ್ಯೆ ನಿಷೇಧ ವಿಧೇಯಕ ಮಂಡನೆಗೆ ಸಂಬಂಧಿಸಿದಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮಾಡಿದ್ದು, ವಿಧಾನಸಭಾ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡನೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರಿಗೆ ಧನ್ಯವಾದ ಎಂದು ತಿಳಿಸಿದ್ದಾರೆ.
ವಿಧಾನಸಭೆಯ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡನೆಯಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪನವರಿಗೆ ಹಾಗೂ ಪಶು ಸಂಗೋಪನಾ ಸಚಿವರಾದ ಶ್ರೀ ಪ್ರಭು ಚವ್ಹಾಣ್ ಅವರಿಗೆ ಧನ್ಯವಾದಗಳು.@BSYBJP @PrabhuChavanBJP pic.twitter.com/c5rzGLqujO
— Kota Shrinivas Poojari (@KotasBJP) December 9, 2020
ಕೇಂದ್ರ ಸಚಿವ ಸದಾನಂದ ಗೌಡ ಅವರು ಸರ್ಕಾರದ ಈ ನಿಲುವನ್ನು ಸ್ವಾಗತಿಸಿದ್ದು, ಗೋ ಹತ್ಯೆ ನಿಷೇಧ ವಿಧೇಯಕವನ್ನು ಅಂಗೀಕರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು. ಇದರಿಂದ ಕೋಟ್ಯಂತರ ರೈತರ, ಗೋ ಪೂಜಕರ ಬಹುದಿನಗಳ ಬೇಡಿಕೆ ಈಡೇರಿದೆ. ಗೋವು ಭಾರತೀಯರ ಜೀವನ, ನಾಗರೀಕತೆ, ಸಂಸ್ಕೃತಿ, ಪರಂಪರೆಯ ಅಂಗವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗೋಹತ್ಯೆ ನಿಷೇಧ ವಿಧೇಯಕವನ್ನು ಅಂಗೀಕರಿಸಿದ ಶ್ರೀ @BSYBJP ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಭಿನಂದನೆಗಳು. ಇದರಿಂದ ಕೋಟ್ಯಂತರ ರೈತರು ಗೋಪೂಜಕರ ಬಹುದಿನಗಳ ಬೇಡಿಕೆ ಈಡೇರಿದೆ. ಗೋವು ಭಾರತೀಯರ ಜೀವನ, ನಾಗರಿಕತೆ, ಸಂಸ್ಕೃತಿ, ಪರಂಪರೆಯ ಅವಿಭಾಜ್ಯ ಅಂಗವಾಗಿದೆ. @BJP4Karnataka pic.twitter.com/IH2yhPcsEC
— Sadananda Gowda (@DVSadanandGowda) December 9, 2020
ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆ. ಸುವರ್ಣ ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ವಿಧೇಯಕವನ್ನು ಮಂಡಿಸಿದೆ. ಗೋ ಮಾತೆಯ ಸೇವೆ ಮಾಡುವುದಕ್ಕೆ ಅವಕಾಶ ನೀಡಿದ, ಈ ಕಾಯ್ದೆಯ ಅಂಗೀಕಾರಕ್ಕೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ಹೇಳಿದ್ದಾರೆ.
We at BJP always “Walk the Talk”.
No more cows will be slaughtered in #SuvarnaKarnataka as Our Government under CM @BSYBJP has passed the Anti-Cow Slaughter Bill in the Assembly today.
Congratulations to everyone who supported @BJP4Karnataka in our endeavour to serve #GauMata. pic.twitter.com/13qWcW1hQS
— C T Ravi 🇮🇳 ಸಿ ಟಿ ರವಿ (@CTRavi_BJP) December 9, 2020
ಗೋ ಹತ್ಯೆ ನಿಷೇಧ ವಿಧೇಯಕ ಮಂಡನೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮತ್ತು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರಿಗೆ ಧನ್ಯವಾದಗಳು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಟ್ವೀಟ್ ಮಾಡಿದ್ದಾರೆ.
ಗೋಹತ್ಯೆ ನಿಷೇಧ ವಿಧೇಯಕ ಮಂಡನೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರ ನೇತೃತ್ವದ ಬಿಜೆಪಿ ಸರ್ಕಾರ ಹಾಗೂ ಪಶು ಸಂಗೋಪನಾ ಸಚಿವರಾದ ಶ್ರೀ ಪ್ರಭು ಚವ್ಹಾಣ್ ಅವರಿಗೆ ಧನ್ಯವಾದಗಳು.@BJP4Karnataka pic.twitter.com/7JdXUyeFWI— Pralhad Joshi (@JoshiPralhad) December 9, 2020
ಕೃಷಿ ಸಚಿವ ಬಿ ಸಿ ಪಾಟೀಲ್ ಅವರು, ವಿಧಾನಸಭಾ ಅಧಿವೇಶನದಲ್ಲಿಗೋ ಹತ್ಯೆ ನಿಷೇಧ ವಿಧೇಯಕವನ್ನು ಮಂಡಿಸುವುದರ ಮೂಲಕ ಪ್ರಜೆಗಳ ಮನದ ಇಂಗಿತಕ್ಕೆ ಸ್ಪಂದಿಸಿ ನುಡಿದಂತೆ ನಡೆದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮತ್ತು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ವಿಧಾನಸಭೆಯ ಅಧಿವೇಶನದಲ್ಲಿ,ಇಂದು ಗೋ ಹತ್ಯೆ ನಿಷೇಧ ವಿಧೇಯಕವನ್ನು ಮಂಡಿಸುವುದರ ಮೂಲಕ ಪ್ರಜೆಗಳ ಮನದ ಇಂಗಿತಕ್ಕೆ ಸ್ಪಂದಿಸಿ ನುಡಿದಂತೆ ನಡೆದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರ ನೇತೃತ್ವದ ರಾಜ್ಯ ಸರ್ಕಾರ ಹಾಗೂ ಪಶು ಸಂಗೋಪನಾ ಸಚಿವರಾದ ಶ್ರೀ @PrabhuChavanBJP ಅವರಿಗೆ ಧನ್ಯವಾದಗಳು. pic.twitter.com/QHd6O67CgS
— Kourava B.C.Patil (@bcpatilkourava) December 9, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.