ಕೋಲ್ಕತ್ತಾ: ಪಶ್ಚಿಮಬಂಗಾಳದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ನಾಯಕ ಕೈಲಾಶ್ ವಿಜಯವರ್ಗಿಯಾ ಅವರ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿಯನ್ನು ನಡೆಸಿದ್ದು, ಕಲ್ಲು ತೂರಾಟ ನಡೆಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಲು ಉಭಯ ನಾಯಕರ ಬೆಂಗಾವಲು ಪಡೆಗಳೊಂದಿಗೆ ಡೈಮಂಡ್ ಹಾರ್ಬರ್ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಕೈಲಾಶ್ ವಿಜಯವರ್ಗಿಯಾ ಅವರಿಗೆ ಘಟನೆಯಲ್ಲಿ ಗಾಯಗಳಾಗಿವೆ ಎನ್ನಲಾಗಿದೆ.
ಕೋಲ್ಕತ್ತಾದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ಬೆಂಗಾವಲಿಗೆ ಕಲ್ಲು ಎಸೆಯಲಾಯಿತು ಎಂದು ಮೂಲಗಳು ತಿಳಿಸಿವೆ.
ಮಾಧ್ಯಮ ಸಿಬ್ಬಂದಿಗಳ ವಾಹನಗಳ ಮೇಲೆ ಕೂಡ ಈ ವೇಳೆ ಕಲ್ಲು ತೂರಾಟ ನಡೆಸಲಾಗಿದೆ ಮೂಲಗಳು ತಿಳಿಸಿವೆ.
‘ನಾವು ಡೈಮಂಡ್ ಹಾರ್ಬರ್ಗೆ ಹೋಗುವಾಗ ಟಿಎಂಸಿ ಬೆಂಬಲಿಗರು ರಸ್ತೆಯನ್ನು ತಡೆದು ನಮ್ಮ ವಾಹನಗಳ ಮೇಲೆ ಕಲ್ಲುಗಳಿಂದ ಹೊಡೆದರು. ಇದು ಟಿಎಂಸಿಯ ನಿಜ ಬಣ್ಣವನ್ನು ತೋರಿಸುತ್ತದೆ ‘ಎಂದು ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ತಿಳಿಸಿದ್ದಾರೆ.
ನಂತರ ಪೊಲೀಸರು ಮಧ್ಯಪ್ರವೇಶಿಸಿ ಬೆಂಗಾವಲು ಸುಗುಮವಾಗಿ ಸಾಗುವಂತೆ ಮಾಡಿದರು ಎನ್ನಲಾಗಿದೆ.
ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನಡ್ಡಾ, ಇವತ್ತು ನಮ್ಮನ್ನು ದುರ್ಗಾ ಮಾತೆಯೇ ರಕ್ಷಣೆ ಮಾಡಿದಳು ಎಂದಿದ್ದಾರೆ.
I have been injured in this attack. The party president’s car was also attacked. We strongly condemn it. In the presence of police, goons attacked us. It felt as if we were not in our own country: BJP leader Kailash Vijayvargiya at South 24 Paraganas https://t.co/H6FFf2G8WD pic.twitter.com/KSVIhDzUN8
— ANI (@ANI) December 10, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.