ನವದೆಹಲಿ: ರೈತರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಕೃಷಿ ಸುಧಾರಣೆಗಳನ್ನು ತರಲಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ತೋಮರ್, ರೈತರನ್ನು ಮಂಡಿ ಸಂಕೋಲೆಗಳಿಂದ ಮುಕ್ತಗೊಳಿಸಲು ಸರ್ಕಾರ ಬಯಸಿದ್ದು, ಇದರಿಂದಾಗಿ ಅವರು ತಮ್ಮ ಉತ್ಪನ್ನಗಳನ್ನು ಎಲ್ಲಿಂದಲಾದರೂ, ಯಾರಿಗಾದರೂ, ತಮ್ಮ ಸ್ವಂತ ಬೆಲೆಗೆ, ಮಂಡಿಯ ವ್ಯಾಪ್ತಿಯಿಂದ ಹೊರಗೆ ಮಾರಾಟ ಮಾಡಬಹುದು ಎಂದಿದ್ದಾರೆ.
ರೈತರು ಆಕ್ಷೇಪಣೆಗಳನ್ನು ಹೊಂದಿರುವ ನಿಬಂಧನೆಗಳ ಬಗ್ಗೆ ಮುಕ್ತ ಮನಸ್ಸಿನ ಚರ್ಚೆಗೆ ಸಿದ್ಧ ಎಂದು ಸರ್ಕಾರ ಈಗಾಗಲೇ ಹೇಳಿದೆ ಎಂದು ಅವರು ಹೇಳಿದರು.
ಕೃಷಿ ಕಾನೂನುಗಳು ಎಪಿಎಂಸಿ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ರೈತರಿಗೆ ವಿವರಿಸಲು ಕೇಂದ್ರ ಪ್ರಯತ್ನಿಸಿದೆ. ಅವರು ಎಂಎಸ್ಪಿ ಮತ್ತು ಎಪಿಎಂಸಿಗಳ ಬಗ್ಗೆ ಕಳವಳವನ್ನು ನಿವಾರಿಸಲು ಕೇಂದ್ರ ರೈತರಿಗೆ ಪ್ರಸ್ತಾಪಗಳನ್ನು ಕಳುಹಿಸಿದೆ, ಆದರೆ ರೈತ ನಾಯಕರು ಅದನ್ನು ತಿರಸ್ಕರಿಸಿದ್ದಾರೆ ಎಂದಿದ್ದಾರೆ.
ಸರ್ಕಾರವು ರೈತ ಮುಖಂಡರ ಸಲಹೆಗಳನ್ನು, ಅವರ ಸಮಸ್ಯೆಗಳನ್ನು ಪರಿಹರಿಸಲು ಕಾಯುತ್ತಲೇ ಇತ್ತು, ಆದರೆ ಅವರು ಕಾನೂನುಗಳನ್ನು ರದ್ದುಪಡಿಸಲು ಪಟ್ಟು ಹಿಡಿದಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.