ನವದೆಹಲಿ: ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಕೇಂದ್ರವು ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿ ಕೋರಿದೆ.
ಬಿಜೆಪಿ ಅಧ್ಯಕ್ಷರ ಭೇಟಿಯ ಸಂದರ್ಭದಲ್ಲಿ ಗಂಭೀರ ಭದ್ರತಾ ಕೊರತೆ ಇತ್ತು ಎಂದು ಆರೋಪಿಸಿ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ದಿಲೀಪ್ ಘೋಷ್ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದ ನಂತರ ಕೇಂದ್ರವು ರಾಜ್ಯ ಸರ್ಕಾರದಿಂದ ವರದಿ ಕೋರಿದೆ.
ನಡ್ಡಾ, ಮುಕುಲ್ ರಾಯ್, ದಿಲೀಪ್ ಘೋಷ್, ಕೈಲಾಶ್ ವಿಜಯವರ್ಗಿಯಾ ಸೇರಿದಂತೆ ಬಿಜೆಪಿ ನಾಯಕರ ಬೆಂಗಾವಲಿನ ಮೇಲೆ ನಿನ್ನೆ ಕಲ್ಲು, ಇಟ್ಟಿಗೆ ಮತ್ತು ಗಾಜಿನ ಬಾಟಲಿಗಳಿಂದ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ವಿಜಯವರ್ಗಿಯಾ ಮತ್ತು ದಿಲೀಪ್ ಘೋಷ್ ಅವರ ಕಾರು ಸೇರಿದಂತೆ ಹಲವಾರು ಕಾರುಗಳು ಹಾನಿಗೊಳಗಾದವು. ನಡ್ಡಾ ಅವರ ವಾಹನವು ಬುಲೆಟ್ ಪ್ರೂಫ್ ಆಗಿದ್ದರಿಂದ, ಅವರು ಯಾವುದೇ ಗಾಯಗಳು ಆಗಿಲ್ಲ.
ಈ ಘಟನೆಯನ್ನು ಕೇಂದ್ರ ಬಹಳ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ದಾಳಿಯನ್ನು ಖಂಡಿಸಿದ್ದಾರೆ. ಈ ಪ್ರಾಯೋಜಿತ ಹಿಂಸಾಚಾರದ ಬಗ್ಗೆ ಪಶ್ಚಿಮ ಬಂಗಾಳದ ಶಾಂತಿ ಪ್ರಿಯ ಜನರಿಗೆ ರಾಜ್ಯ ಸರ್ಕಾರ ಉತ್ತರಿಸಬೇಕಾಗುತ್ತದೆ ಎಂದು ಸರಣಿ ಟ್ವೀಟ್ಗಳಲ್ಲಿ ಶಾ ಹೇಳಿದ್ದಾರೆ.
MHA summons DGP of West Bengal on Dec 14 over yesterday’s attack on BJP National President @JPNadda convoy & other law & order issues . @MamataOfficial should know that there is constitution & many laws in this country to control your jungle rule .
— B L Santhosh (@blsanthosh) December 11, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.