ಬೆಂಗಳೂರು: ರಾಜ್ಯದ ಸಾರಿಗೆ ನೌಕರರ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕೊರೋನಾ ಸಂದರ್ಭದಲ್ಲಿ ಆರ್ಥಿಕ ಸಮಸ್ಯೆ ಇದೆ. ಈ ಪರಿಸ್ಥಿತಿಯನ್ನು ಅರಿತುಕೊಂಡು ಯಾವುದೇ ಗೊಂದಲಗಳನ್ನು ಸೃಷ್ಟಿಸದಂತೆ ಪ್ರತಿಭಟನಾ ನಿರತ ನೌಕರರಲ್ಲಿ ಮನವಿ ಮಾಡಿದ್ದಾರೆ.
ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಹಣಕಾಸಿನ ಸಮಸ್ಯೆ ಇರುವಾಗ ಇಂತಹ ಗೊಂದಲಮಯ ವಾತಾವರಣ ಸೃಷ್ಟಿಸುವುದು ಸರಿಯಾದ ಕ್ರಮವಲ್ಲ. ಆದ್ದರಿಂದ ಎಲ್ಲಾ ನೌಕರರು ಮರಳಿ ತಮ್ಮ ಕರ್ತವ್ಯಕ್ಕೆ ತೆರಳಬೇಕು, ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಂಬಂಧಪಟ್ಟವರ ಜೊತೆಗೆ ಮಾತುಕತೆಯನ್ನು ನಡೆಸಿದ್ದಾರೆ. ಇದೀಗ ಮುಖ್ಯಮಂತ್ರಿಯಾಗಿ ತಾವು ಸಹ ನೌಕರರಲ್ಲಿ ಮನವಿ ಮಾಡುತ್ತಿದ್ದು, ತಕ್ಷಣವೇ ಈ ಎಲ್ಲಾ ಪ್ರತಿಭಟನೆಗಳನ್ನು ಕೈ ಬಿಟ್ಟು ಮರಳಿ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ. ಇಂತಹ ಮುಷ್ಕರಗಳಿಂದ ಸಾರ್ವಜನಿಕರು ಸಹ ಸಮಸ್ಯೆ ಅನುಭವಿಸುವಂತಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಇನ್ನು ಸಾರಿಗೆ ನೌಕರರ ಮುಷ್ಕರ ಸಂಬಂಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೂ ಮಾತನಾಡಿದ್ದು, ನೌಕರರು ಅವರ ಸಮಸ್ಯೆ, ಬೇಡಿಕೆಗಳನ್ನು ಸರ್ಕಾರದ ಮುಂದಿರಿಸಬೇಕು. ಅವೆಲ್ಲವನ್ನೂ ಪರಿಶೀಲಿಸಿ ಸರ್ಕಾರ ಸೂಕ್ತ ಪರಿಹಾರ ನೀಡಲು ಪ್ರಯತ್ನ ನಡೆಸಲಿದೆ. ಇಂತಹ ಪ್ರತಿಭಟನೆಗಳಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಿದ್ದಾರೆ. ಆದ್ದರಿಂದ ಕರ್ತವ್ಯಕ್ಕೆ ಹಾಜರಾಗುವಂತೆಯೂ ಅವರು ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.