ಬೆಂಗಳೂರು: ರಾಜ್ಯದಲ್ಲಿ ಕೃಷಿಗೆ ಪೂರಕವಾದ ತಂತ್ರಜ್ಞಾನಗಳಾದ ಭೂಸಿರಿ ಮತ್ತು ಭೂಮಿತ್ರ ಯಂತ್ರಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ರೈತರ ಹೊಲಗಳಲ್ಲಿ ಸಂಗ್ರಹವಾಗುವ ಕೃಷಿ ತ್ಯಾಜ್ಯ ವಸ್ತುಗಳನ್ನು ಸಾವಯವ ಗೊಬ್ಬರವನ್ನಾಗಿ ಸ್ಥಳದಲ್ಲೇ ಪರಿವರ್ತನೆ ಮಾಡುವ ಭೂಸಿರಿ ಮತ್ತು ಕೃಷಿ ಭೂಮಿಯ ಮಣ್ಣು ಪರೀಕ್ಷೆಗೆ ಪೂರಕವಾದ ಭೂಮಿತ್ರ ಆಧುನಿಕ ತಂತ್ರಜ್ಞಾನಗಳಾಗಿದ್ದು, ಇವುಗಳು ರೈತರಿಗೆ ಕೃಷಿ ಚಟುವಟಿಕೆಯಲ್ಲಿ ಮತ್ತಷ್ಟು ಸಹಕಾರಿಯಾಗಲಿವೆ ಎಂದು ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಇದೊಂದು ಕ್ರಾಂತಿಕಾರಕ ಹೆಜ್ಜೆಯಾಗಿದೆ. ಹಸಿ, ಒಣ ಕಸಗಳನ್ನು ಪ್ರಕೃತಿಗೆ ಪೂರಕವಾದ ಸಾವಯವ ಗೊಬ್ಬರವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಈ ಯಂತ್ರ ಕೃಷಿ ಸ್ನೇಹಿಯಾಗಲಿದೆ. ಇಂತಹ ಯಂತ್ರಗಳು ಪ್ರಸ್ತುತ ದಿನದ ಅಗತ್ಯವಾಗಿದೆ. ಇದು ಕೃಷಿಕರ ಒತ್ತಡವನ್ನು ಕಡಿಮೆ ಮಾಡಲು, ಉತ್ಪಾದನೆ ಹೆಚ್ಚಿಸಲು ಪೂರಕವಾಗಲಿವೆ. ಇಂತಹ ಸಂಶೋಧನೆಗಳು ಹೆಚ್ಚು ಪ್ರಮಾಣದಲ್ಲಿ ನಡೆಯಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ. ಸಿ. ಪಾಟೀಲ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.