ನವದೆಹಲಿ: ಚುನಾವಣೆಯಲ್ಲಿ ಒಂದರ ಹಿಂದೊಂದರಂತೆ ಸೋಲುಗಳನ್ನು ಕಾಣುತ್ತಿರುವ ಕಾಂಗ್ರೆಸ್ ತನ್ನ ಉನ್ನತ ನಾಯಕತ್ವದ ಬಗ್ಗೆ ಟೀಕೆಗಳನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಮುಖಂಡ ಹಾಗೂ ದೇಶದ ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖರ್ಜಿ ಅವರ ಆತ್ಮಚರಿತ್ರೆ ಹೊರ ಬರುತ್ತಿದ್ದು, ಕಾಂಗ್ರೆಸ್ ಪಕ್ಷದ ಮತ್ತಷ್ಟು ಹುಳುಕುಗಳನ್ನು ಹೊರ ತೆಗೆದಿದೆ.
ಆಗಸ್ಟ್ ತಿಂಗಳಲ್ಲಿ ನಿಧನರಾದ ಪ್ರಣವ್, 2014 ರಲ್ಲಿ ಕಾಂಗ್ರೆಸ್ ಸೋಲಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಕಾರಣ ಎಂದು ದೂಷಿಸಿದ್ದಾರೆ. “ಕಾಂಗ್ರೆಸ್ಸಿನ ಕೆಲವು ಸದಸ್ಯರು ನಾನು ಪ್ರಧಾನಿಯಾಗಿದ್ದರೆ ಪಕ್ಷವು ಅಧಿಕಾರವನ್ನು ಕಳೆದುಕೊಳ್ಳುತ್ತಿರಲಿಲ್ಲ ಎಂದು ನಂಬಿದ್ದರು” ಎಂದು ಪ್ರಣಬ್ ಆತ್ಮಚರಿತ್ರೆಯಲ್ಲಿ ಬರೆದಿದ್ದಾರೆ.
“ಕಾಂಗ್ರೆಸ್ಸಿನ ಕೆಲವು ಸದಸ್ಯರು 2004 ರಲ್ಲಿ ನಾನು ಪ್ರಧಾನಿಯಾಗಿದ್ದರೆ, ಪಕ್ಷವು 2014 ರ ಲೋಕಸಭಾ ಚುನಾವಣೆಯನ್ನು ಸೋಲುತ್ತಿರಲಿಲ್ಲ ಎಂದು ನಂಬಿದ್ದರು. ಈ ಸಿದ್ಧಾಂತವನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಆದರೂ, ನಾನು ರಾಷ್ಟ್ರಪತಿಯಾದ ಬಳಿಕ ಪಕ್ಷದ ನಾಯಕತ್ವವು ರಾಜಕೀಯ ಗಮನವನ್ನು ಕಳೆದುಕೊಂಡಿತು ಎಂದು ನಾನು ನಂಬುತ್ತೇನೆ. ಸಿಂಗ್ ಅವರು ಸದನಕ್ಕೆ ಹಾಜರಾಗದೇ ಇರುತ್ತಿದ್ದದ್ದು, ಸಂಸದರೊಂದಿಗೆ ನೇರ ಸಂಪರ್ಕವನ್ನು ಕಳೆದುಕೊಳ್ಳುವಂತೆ ಮಾಡಿತು” ಎಂದು ಮುಖರ್ಜಿ ಬರೆದಿದ್ದಾರೆ ಎನ್ನಲಾಗಿದೆ.
ಜನವರಿಯಲ್ಲಿ ಆತ್ಮಚರಿತ್ರೆ ʼಪ್ರೆಸಿಡೆನ್ಶಿಯಲ್ ಇಯರ್ಸ್ʼ ಬಿಡುಗಡೆಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.