ಭುವನೇಶ್ವರ: ಒಡಿಶಾದ ಕಲಾವಿದರೊಬ್ಬರು ಮಯೂರ್ಭಂಜ್ನ ಸಿಮಿಲಿಪಾಲ್ ರಾಷ್ಟ್ರೀಯ ಉದ್ಯಾನವನದ ಮರಗಳ ಮೇಲೆ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರಗಳನ್ನು ಕೆತ್ತಿದ್ದಾರೆ. ಅರಣ್ಯದಲ್ಲಿ ಅಕ್ರಮವಾಗಿ ಮರಗಳನ್ನು ಕಡಿಯಲಾಗುತ್ತಿದ್ದು, ಈ ಬಗ್ಗೆ ಪ್ರಧಾನಿ ಗಮನ ಹರಿಸಬೇಕು ಎಂದು ಮನವಿ ಮಾಡಿ ಕಲಾವಿದ ಸಮರೇಂದ್ರ ಬೆಹೆರಾ ಪ್ರಧಾನಿ ಭಾವಚಿತ್ರ ಕೆತ್ತಿದ್ದಾರೆ.
“ಈ ಭಾವಚಿತ್ರದ ಮೂಲಕ, ಈ ಕಾಡಿನಲ್ಲಿ ಅಕ್ರಮವಾಗಿ ಮರಗಳನ್ನು ಕಡಿಯುವುದನ್ನು ಗಮನಿಸಬೇಕೆಂದು ನಾನು ಮೋದಿಜಿಗೆ ವಿನಂತಿಯನ್ನು ಕಳುಹಿಸಲು ಬಯಸುತ್ತೇನೆ. ನಾನು ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಸಣ್ಣ ಕಲಾವಿದ. ನಾನು ಗೌರವಾನ್ವಿತ ಪ್ರಧಾನಿಯನ್ನು ವೈಯಕ್ತಿಕವಾಗಿ ಭೇಟಿಯಾಗಲು ಸಾಧ್ಯವಿಲ್ಲ ಎಂದು ನನಗೆ ತಿಳಿದಿದೆ” ಎಂದು ಬೆಹೆರಾ ಹೇಳಿದ್ದಾರೆ.
ದೇಶದ ಆರೋಗ್ಯ ಮತ್ತು ಅಭಿವೃದ್ಧಿ ಕಾರ್ಯಗಳತ್ತ ಹೆಜ್ಜೆ ಇಟ್ಟಿದ್ದಕ್ಕಾಗಿ ಪ್ರಧಾನ ಮಂತ್ರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಧನ್ಯವಾದ ಹೇಳುವ ಕಾರಣಕ್ಕೂ ನಾನು ಕಾಡಿನೊಳಗಿನ ಮರದ ಮೇಲೆ ಅವರ ಭಾವಚಿತ್ರವನ್ನು ಚಿತ್ರಿಸಿದ್ದೇನೆ ಮತ್ತು ಪರಿಸರವನ್ನು ಉಳಿಸುವಂತೆ ಎಲ್ಲರಿಗೂ ಸಂದೇಶವನ್ನು ಕಳುಹಿಸಲು ಪ್ರಯತ್ನಿಸುತ್ತೇನೆ” ಎಂದು ಅವರು ಹೇಳಿದ್ದಾರೆ.
ಮಯೂರ್ಭಂಜ್ನ ಸಿಮಿಲಿಪಾಲ್ ರಾಷ್ಟ್ರೀಯ ಉದ್ಯಾನವನದಲ್ಲಿ ಮರದ ಮೇಲೆ ಕೆತ್ತಿದ ಪಿಎಂ ಮೋದಿಯವರ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.