ನವದೆಹಲಿ: ಉತ್ತರಾಖಂಡದ ರೈತರ ನಿಯೋಗವು ನಿನ್ನೆ ನವದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ಹೊಸದಾಗಿ ಜಾರಿಗೆ ತಂದ ಮೂರು ಕೃಷಿ ಕಾನೂನುಗಳಿಗೆ ತಮ್ಮ ಬೆಂಬಲವನ್ನು ನೀಡಿತು.
ತೋಮರ್ ಅವರು ಕಾನೂನುಗಳನ್ನು ಬೆಂಬಲಿಸಿದ್ದಕ್ಕಾಗಿ ರೈತರಿಗೆ ಧನ್ಯವಾದ ಅರ್ಪಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಕೃಷಿ ಸಚಿವರು, ರೈತರು ಕಾನೂನುಗಳನ್ನು ಅರ್ಥಮಾಡಿಕೊಂಡಿದ್ದಾರೆ, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಮತ್ತು ಅದನ್ನು ಬೆಂಬಲಿಸಿದ್ದಾರೆ ಎಂದಿದ್ದಾರೆ.
ಸಭೆಯಲ್ಲಿ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಕೈಲಾಶ್ ಚೌಧರಿ ಮತ್ತು ಉತ್ತರಾಖಂಡ ಶಿಕ್ಷಣ ಸಚಿವ ಅರವಿಂದ್ ಪಾಂಡೆ ಉಪಸ್ಥಿತರಿದ್ದರು.
ತೋಮರ್ ಅವರನ್ನು ಭೇಟಿಯಾದ ಮತ್ತು ಕೃಷಿ ಕಾನೂನುಗಳಿಗೆ ಬೆಂಬಲವನ್ನು ನೀಡಿದ ರೈತರ ಮೂರನೇ ಗುಂಪು ಇದಾಗಿದೆ. ಈ ಮೊದಲು, ಹರಿಯಾಣದ ಎರಡು ರೈತರ ನಿಯೋಗವು ತೋಮರ್ ಅವರನ್ನು ಭೇಟಿಯಾಗಿ ಹೊಸ ಕೃಷಿ ಕಾನೂನುಗಳಿಗೆ ತಮ್ಮ ಬೆಂಬಲವನ್ನು ನೀಡಿದೆ. ಭಾರತೀಯ ಕಿಸಾನ್ ಯೂನಿಯನ್ ಹರಿಯಾಣದ ರಾಜ್ಯ ಮುಖಂಡ ಗುಣಿ ಪ್ರಕಾಶ್ ನೇತೃತ್ವದ ನಿಯೋಗವು ಕೃಷಿ ಕಾನೂನುಗಳ ಬಗ್ಗೆ ತೋಮರ್ಗೆ ಬೆಂಬಲ ಪತ್ರವನ್ನು ಸಲ್ಲಿಸಿತು ಮತ್ತು ಈ ಕಾನೂನುಗಳನ್ನು ಮುಂದುವರಿಸಲು ಸರ್ಕಾರವನ್ನು ಒತ್ತಾಯಿಸಿದರು. ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದರೆ ಪ್ರತಿಭಟನೆ ಪ್ರಾರಂಭಿಸುವುದಾಗಿ ಬೆದರಿಕೆ ಹಾಕಿದರು. ನಡೆಯುತ್ತಿರುವ ರೈತರ ಆಂದೋಲನವು ರೈತ ಚಳುವಳಿಯಲ್ಲ ಎಂದು ಗುಣಿ ಪ್ರಕಾಶ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.