ನವದೆಹಲಿ: ರೈತ ಪ್ರತಿಭಟನೆಯ ಲಾಭ ಪಡೆಯಲು ಪ್ರಯತ್ನಿಸುತ್ತಿರುವ ದೇಶ ಒಡೆಯುವ ತುಕ್ಡೆ ತುಕ್ಡೆ ಗ್ಯಾಂಗ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಎಚ್ಚರಿಸಿದ್ದಾರೆ.
ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಗಲಭೆ ನಡೆಸಿದ್ದಕ್ಕಾಗಿ ಕಂಬಿಗಳ ಹಿಂದೆ ಇರುವವರನ್ನು ಬಿಡುಗಡೆಗೊಳಿಸುವಂತೆ ರೈತ ಪ್ರತಿಭಟನೆಗಳಲ್ಲಿ ಫಲಕಗಳನ್ನು ಹಿಡಿಯಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸಚಿವರು ಈ ಎಚ್ಚರಿಕೆಯನ್ನು ರವಾನಿಸಿದ್ದಾರೆ.
ತುಕ್ಡೆ ತುಕ್ಡೆ ಗ್ಯಾಂಗ್ ರೈತ ಪ್ರತಿಭಟನೆಯಡಿಯಲ್ಲಿ ಆಶ್ರಯ ಪಡೆದುಕೊಂಡಿದೆ, ಆದರೆ ನಮ್ಮ ಸರ್ಕಾರ ಅವರ ಗುರಿಯನ್ನು ಯಶಸ್ವಿಯಾಗಲು ಎಂದಿಗೂ ಬಿಡಲಾರದು ಎಂದಿದ್ದಾರೆ.
ಬಿಹಾರ ಬಿಜೆಪಿ ರಾಜ್ಯವ್ಯಾಪಿ ನಡೆಸಿದ ಕಿಸಾನ್ ಚೌಪಾಲ್ ಸಮ್ಮೇಳನದ ಭಾಗವಾಗಿ ಪಾಟ್ನಾ ಜಿಲ್ಲೆಯ ಬಖ್ತಿಯಾರ್ಪುರ್ ವಿಧಾನಸಭಾ ಕ್ಷೇತ್ರದ ತೆಕ್ಬಿಘಾ ಗ್ರಾಮದಲ್ಲಿ ಕೃಷಿ ಕಾನೂನುಗಳನ್ನು ಬೆಂಬಲಿಸಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡುತ್ತಿದ್ದರು.
ರೈತರಿಗೆ ಅದರಲ್ಲೂ ವಿಶೇಷವಾಗಿ ದೇಶಾದ್ಯಂತದ ಸಣ್ಣ ಮತ್ತು ಅಲ್ಪ ಪ್ರಮಾಣದ ಕೃಷಿ ಜನರಿಗೆ ಅನುಕೂಲವಾಗುವಂತೆ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ರವಿಶಂಕರ್ ಪ್ರಸಾದ್ ಪ್ರತಿಪಾದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.