ನವದೆಹಲಿ: ಚೀನಾ ಮತ್ತು ಭಾರತದ ನಡುವಿನ ಗಡಿ ಭಾಗದಲ್ಲಿ ಚೀನಾದೊಂದಿಗೆ ಸಂಘರ್ಷಗಳಾಗುತ್ತಿರುವ ನಡುವೆಯೇ, 15 ದಿನಗಳ ಯುದ್ಧಕ್ಕೆ ಅಗತ್ಯವಾಗುವ ಶಸ್ತ್ರಾಸ್ತ್ರಗಳನ್ನು ಸಂಗ್ರಹ ಮಾಡಲು ರಕ್ಷಣಾ ಪಡೆಗಳಿಗೆ ಭಾರತ ಸೂಚನೆಯನ್ನು ನೀಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದೇಶದ ಈಶಾನ್ಯ ಲಡಾಖ್ ಪ್ರದೇಶದಲ್ಲಿ ನಡೆಯುತ್ತಿರುವ ಘರ್ಷಣೆಯ ಕಾರಣವನ್ನಿಟ್ಟುಕೊಂಡು ಭಾರತ ಶಸ್ತ್ರಾಸ್ತ್ರಗಳನ್ನು ಸಂಗ್ರಹ ಮಾಡಿಡುವ ಕಾರ್ಯದಲ್ಲಿ ನಿರತವಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಹೊರಟಿರುವ ದೇಶದ ರಕ್ಷಣಾ ಪಡೆಗಳು 50 ಸಾವಿರ ಕೋಟಿ ರೂ. ಗಳಲ್ಲಿ ಸ್ಥಳೀಯ ಹಾಗೂ ವಿದೇಶೀ ಮೂಲಗಳಿಂದ ಅಗತ್ಯವಿರುವ ಉಪಕರಣಗಳು, ಶಸ್ತ್ರಾಸ್ತ್ರಗಳ ಸಂಗ್ರಹಕ್ಕೆ ಮುಂದಾಗಿದೆ.
ಸದ್ಯ ಹತ್ತು ದಿನಗಳಿಗೆ ಸಾಕಾಗುವಷ್ಟು ಶಸ್ತ್ರಾಸ್ತ್ರಗಳ ಸಂಗ್ರಹವನ್ನು ಮಾಡಿಟ್ಟುಕೊಳ್ಳಲಾಗುತ್ತಿತ್ತು. ಆದರೆ ಸದ್ಯ ಚೀನಾ, ಪಾಕಿಸ್ತಾನ ಎರಡೂ ಶತ್ರು ರಾಷ್ಟ್ರಗಳಿಂದ ಸಂಭಾವ್ಯ ಯುದ್ಧ ಎದುರಿಸಲು ಹದಿನೈದು ದಿನಗಳ ಯುದ್ಧಕ್ಕೆ ಅನುಕೂಲವಾಗುವಷ್ಟು ಶಸ್ತ್ರಾಸ್ತ್ರ ಸಂಗ್ರಹಿಸಲು ಮುಂದಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉರಿ ದಾಳಿಯ ಬಳಿಕ ಆಗಿನ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್ ನೇತೃತ್ವದ ರಕ್ಷಣಾ ಸಚಿವಾಲಯ ಶಸ್ತ್ರಾಸ್ತ್ರಗಳ ಖರೀದಿ, ರಕ್ಷಣಾ ಸಚಿವಾಲಯಕ್ಕೆ ಹೆಚ್ಚಿನ ಆರ್ಥಿಕ ಅಧಿಕಾರವನ್ನು ನೀಡಿ ಆದೇಶ ಹೊರಡಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.