ಬೆಂಗಳೂರು: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ನೀಡಿರುವ ಭರವಸೆಯ ಬಗ್ಗೆ ಸರ್ಕಾರ ಲಿಖಿತ ಹೇಳಿಕೆಗಳನ್ನು ನೀಡುವುದಕ್ಕೂ ಸಿದ್ಧವಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕಾರ್ಮಿಕರ ಪರವಾಗಿ ಸರ್ಕಾರ ತೆಗೆದುಕೊಂಡಿರುವ ತೀರ್ಮಾನಕ್ಕೆ ಸರ್ಕಾರ ಬದ್ಧವಾಗಿದೆ. ಆದ್ದರಿಂದ ನೌಕರರು ಯಾವುದೇ ಗೊಂದಲಗಳಿಗೆ ಒಳಗಾಗಿದೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ. ಸರ್ಕಾರ ಈಡೇರಿಸುವುದಾಗಿ ಭರವಸೆ ನೀಡಿರುವ ಬೇಡಿಕೆಗಳ ಬಗ್ಗೆ ಲಿಖಿತವಾಗಿ ಬರೆದು ಕೊಡುವುದಕ್ಕೆ ಸಹ ಸಿದ್ಧವಿರುವುದಾಗಿ ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, ಸಾರಿಗೆ ನೌಕರರ ಈ ಮುಷ್ಕರವನ್ನು ಇಡೀ ಕರ್ನಾಟಕದ ಜನರು ಗಮನಿಸುತ್ತಿದ್ದಾರೆ. ಇಲಾಖೆಗೆ ಯಾವುದೇ ರೀತಿಯಲ್ಲಿಯೂ ಸಂಬಂಧಪಡದ ವ್ಯಕ್ತಿಯೊಬ್ಬ ತನ್ನ ಸ್ವ ಪ್ರತಿಷ್ಠೆಯನ್ನಿಟ್ಟುಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ. ಇದರಿಂದ ರೋಗಿಗಳು ಸೇರಿದಂತೆ ಎಲ್ಲಾ ವರ್ಗದ ಪ್ರಯಾಣಿಕರು ಸಮಸ್ಯೆ ಅನುಭವಿಸುವಂತಾಗಿದೆ ಎಂದು ತಿಳಿಸಿದ್ದಾರೆ.
ನೌಕರರ 9 ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಸರ್ಕಾರದ ಸಚಿವರು ಬಹಿರಂಗ ಹೇಳಿಕೆಗಳನ್ನು ನೀಡಿದ್ದಾರೆ. ಸರ್ಕಾರದ ಭರವಸೆಯನ್ನು ನಂಬಿ ನೌಕರರು ಸಾರ್ವಜನಿಕರ ನೋವನ್ನು ಅರಿತು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಅಶೋಕ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.