ಬೆಂಗಳೂರು: ದೇಶದಲ್ಲಿನ ಪೈಲಟ್ಗಳ ಸಮಸ್ಯೆ ನಿವಾರಣೆಯ ಹಿನ್ನೆಲೆಯಲ್ಲಿ ದೇಶದಾದ್ಯಂತ 6 ವಿಮಾನ ತರಬೇತಿ ಸಂಸ್ಥೆಗಳನ್ನು ತೆರೆಯಲು ಮುಂದಾಗಿದ್ದು, ಅವುಗಳಲ್ಲಿ ಎರಡು ಶಾಲೆಗಳು ಉತ್ತರ ಕರ್ನಾಟಕದಲ್ಲಿ ನಿರ್ಮಾಣವಾಗಲಿವೆ.
ರಾಜ್ಯದ ಬೆಳಗಾವಿ ಮತ್ತು ಕಲ್ಬುರ್ಗಿಯಲ್ಲಿ ಈ ತರಬೇತಿ ಶಾಲೆಗಳನ್ನು ತೆರೆಯಲಾಗುತ್ತಿದ್ದು, ಇದಕ್ಕಾಗಿ ಬಿಡ್ಡಿಂಗ್ ಪ್ರಕ್ರಿಯೆ ಸಹ ನಡೆಯುತ್ತಿದೆ. ಈ ಎರಡೂ ನಗರಗಳಲ್ಲಿನ ವಿಮಾನ ನಿಲ್ದಾಣಗಳು ಉಡಾನ್ ಯೋಜನೆಯಡಿ ನಿರ್ಮಾಣವಾಗಿವೆ. ದೇಶದಲ್ಲಿ ಮುಂದಿನ 5 ವರ್ಷಗಳಿಗೆ ಸಂಬಂಧಿಸಿದಂತೆ ಸುಮಾರು 9,400 ಪೈಲಟ್ಗಳ ಅಗತ್ಯ ತಲೆದೋರಲಿದೆ. ಪ್ರಸ್ತುತ ದೇಶದಿಂದ 30% ಗಳಷ್ಟು ಮಹತ್ವಾಕಾಂಕ್ಷಿ ಪೈಲಟ್ಗಳು ತರಬೇತಿಗಾಗಿ ವಿದೇಶದತ್ತ ಮುಖ ಮಾಡುತ್ತಿದ್ದಾರೆ. ಇದಕ್ಕೆ ತಗುಲುವ ಖರ್ಚು ಸಹ ಅಧಿಕವಾಗಿದ್ದು, ಈ ಹಿನ್ನೆಲೆಯಲ್ಲಿ ದೇಶದಲ್ಲೇ ಪೈಲಟ್ ತರಬೇತಿ ಶಾಲೆಗಳನ್ನು ತೆರೆಯಲು ಕೇಂದ್ರ ಸರ್ಕಾರ ಮುಂದಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ಮಾತನಾಡಿದ್ದು, ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಸ್ತಾಪಿಸಿರುವ ಎಫ್ಟಿಒ ರನ್ವೇ ಅಡಿಯಲ್ಲಿ 10 ಮೀ. ಕೆಳಗೆ ಬರುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಭೂಮಿಯನ್ನು ಗುತ್ತಿಗೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ 5 ಕಂಪೆನಿಗಳು ಆಸಕ್ತಿ ವ್ಯಕ್ತಪಡಿಸಿದ್ದವು. ಪ್ರಸ್ತುತ ಬಿಡ್ಡಿಂಗ್ ಪ್ರಕ್ರಿಯೆ ನಡೆಯುತ್ತಿದ್ದು, ಬಿಡ್ ನೀಡಲು ಡಿ. 22 ಕೊನೆಯ ದಿನವಾಗಿದೆ. ಒಪ್ಪಂದದ ಬಳಿಕ ಸುಮಾರು ಒಂದೂವರೆಯಿಂದ ಎರಡು ವರ್ಷಗಳೊಳಗಾಗಿ ಈ ಶಾಲೆ ಅಸ್ತಿತ್ವದಲ್ಲಿರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎಎಐ ನೀತಿಯನ್ವಯ ಎಫ್ಟಿಒ ಗಳನ್ನು 25 ವರ್ಷಗಳ ಗುತ್ತಿಗೆ ಅವಧಿಯಲ್ಲಿ ಬಿಡ್ ದಾರರಿಗೆ ನೀಡಲಾಗುತ್ತದೆ. ಒಪ್ಪಂದ ಅವಧಿ ಮುಗಿದ ಬಳಿಕ ಶೂನ್ಯ ವೆಚ್ಚದಲ್ಲಿ ಎಎಐಗೆ ಹಿಂದಿರುಗಿಸಲಾಗುತ್ತದೆ. ಪ್ರತಿಯೊಂದು ವಿಮಾನ ನಿಲ್ದಾಣಗಳಲ್ಲಿ ಗರಿಷ್ಠ ಎರಡು ಎಫ್ಟಿಒಗಳಿಗೆ ಅನುಮತಿ ನೀಡಲಾಗುತ್ತದೆ ಎಂದು ರಾಜೇಶ್ ಮೌರ್ಯ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.