ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯ ಭಾರೀ ಮಳೆ, ನೆರೆ, ಪ್ರವಾಹ ಮೊದಲಾದವುಗಳಿಂದ ಸಂಕಷ್ಟ ಅನುಭವಿಸಿರುವ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಅನುಕೂಲವಾಗುವಂತೆ ರಾಜ್ಯಕ್ಕೆ ಹೆಚ್ಚಿನ ನೆರವು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇಂದ್ರ ಪ್ರವಾಹ ಅಧ್ಯಯನ ತಂಡಕ್ಕೆ ಮನವಿ ಸಲ್ಲಿಸಿದ್ದಾರೆ.
ತಮ್ಮ ಗೃಹ ಕಚೇರಿ ಕೃಷ್ಣಾ ದಲ್ಲಿ ಪ್ರವಾಹ ಪರಿಸ್ಥಿತಿ ಸಮೀಕ್ಷೆ ನಡೆಸಲು ಆಗಮಿಸಿದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯದ ಪ್ರವಾಹದ ಸಂದರ್ಭದಲ್ಲಿ ಎರಡು ಬಾರಿ ವಿಡಿಯೋ ಕಾಲ್ ಮೂಲಕ ಪರಿಸ್ಥಿತಿ ಅವಲೋಕಿಸಿರುವುದಕ್ಕೂ ಧನ್ಯವಾದ ಸಮರ್ಪಿಸಿದ್ದಾರೆ. ಅದರೊಂದಿಗೆ ಎನ್ಡಿಆರ್ಎಫ್ ನಿಂದ ಕೇಂದ್ರ ಸರ್ಕಾರ 577.84 ಕೋಟಿ ರೂ. ಗಳನ್ನು ಪರಿಹಾರವಾಗಿ ಈಗಾಗಲೇ ನೀಡಿದೆ. ಇದೀಗ ಪ್ರವಾಹ ಸ್ಥಿತಿಗತಿ ಅರಿಯುವುದಕ್ಕೆ ಎರಡನೇ ತಂಡವನ್ನು ರಾಜ್ಯಕ್ಕೆ ಕಳುಹಿಸಿರುವುದಕ್ಕೂ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಮರ್ಪಿಸಿದ್ದಾರೆ.
ರಾಜ್ಯದಲ್ಲಿ ಪ್ರವಾಹ ಮತ್ತು ಭೂ ಕುಸಿತದಿಂದಾಗಿ 16 ಲಕ್ಷ ಹೆ. ಪ್ರದೇಶ ಗಳ ಕೃಷಿ ನಾಶವಾಗಿದೆ. ಮೂಲಭೂತ ಸೌಕರ್ಯಗಳಿಗೂ ಅಪಾರ ಪ್ರಮಾಣದಲ್ಲಿ ಹಾನಿಯುಂಟಾಗಿದೆ. 34,749 ಮನೆಗಳಿಗೂ ಪ್ರವಾಹದಿಂದ ಹಾನಿಯುಂಟಾಗಿದೆ. ಒಟ್ಟಿನಲ್ಲಿ ಸುಮಾರು 15,410 ಕೋಟಿ ರೂ. ಗಳಷ್ಟು ಹಾನಿ ಸಂಭವಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.