ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ದೇಶದ ಹಿರಿಯ ವಿಜ್ಞಾನಿ, ಪ್ರೊ. ರೊದ್ದಂ ನರಸಿಂಹ(87) ಅವರು ವಿಧಿವಶರಾಗಿದ್ದಾರೆ.
ಅನಾರೋಗ್ಯದ ನಿಮಿತ್ತ ಕಳೆದೊಂದು ವಾರದಿಂದ ರೊದ್ದಂ ಅವರನ್ನು ಬೆಂಗಳೂರಿನ ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಹಲೋಕ ತ್ಯಜಿಸುವ 48 ಗಂಟೆಗಳ ಮೊದಲು ಇವರಿಗೆ ಕೃತಕ ಉಸಿರಾಟದ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.
ಇವರು 1933 ರಂದು ಜನಿಸಿದವರಾಗಿದ್ದು, ಮೈಸೂರು ವಿವಿ ಇಂದ ಬಿಇ ಪದವಿ ಪಡೆದಿದ್ದರು. ಆ ಬಳಿಕ ಐಐಎಸ್ಸಿ ಮತ್ತು ಕ್ಯಾಲಿಫೋರ್ನಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಉನ್ನತ ಶಿಕ್ಷಣ ಮತ್ತು ಸಂಶೋಧನೆ ನಡೆಸಿದ್ದರು. ಇವರು ಭಾರತೀಯ ವೈಮಾನಿಕ ವಿಜ್ಞಾನಿ ಮತ್ತು ದ್ರವಚಲನ ಶಾಸ್ತ್ರಜ್ಞರಾಗಿದ್ದರು.
ಮೃತರು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ನ ಪ್ರಾಧ್ಯಾಪಕರಾಗಿಯೂ, ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರಿ ನಿರ್ದೇಶಕರಾಗಿಯೂ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ನ ನಿರ್ದೇಶಕರಾಗಿ ಮತ್ತು ಬೆಂಗಳೂರಿನ ಜವಹರಲಾಲ್ ನೆಹರು ಕೇಂದ್ರದ ಎಂಜಿನಿಯರಿಂಗ್ ಮೆಕ್ಯಾನಿಕ್ಸ್ ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
Shri Roddam Narasimha personified the best of India’s tradition of knowledge and enquiry. He was an outstanding scientist, passionate about leveraging the power of science and innovation for India’s progress. Pained by his demise. Condolences to his family and friends. Om Shanti.
— Narendra Modi (@narendramodi) December 15, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.