ನವದೆಹಲಿ: ‘ಐರನ್ ಮ್ಯಾನ್ ಆಫ್ ಇಂಡಿಯಾ’ ಎಂದೇ ಖ್ಯಾತರಾಗಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 70 ನೇ ಪುಣ್ಯತಿಥಿಯನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ನಾಯಕರು ಮಹಾನ್ ಚೇತನಕ್ಕೆ ಗೌರವಾರ್ಪಣೆ ಮಾಡಿದರು.
“ಸಶಕ್ತ, ಸದೃಢ ಮತ್ತು ಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ ಲೋಹ ಪುರುಷ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ನಾನು ಗೌರವ ಸಲ್ಲಿಸುತ್ತೇನೆ. ಅವರ ಮಾರ್ಗವು ಯಾವಾಗಲೂ ದೇಶದ ಏಕತೆ, ಸಮಗ್ರತೆ ಮತ್ತು ಸಾರ್ವಭೌಮತ್ವವನ್ನು ರಕ್ಷಿಸಲು ನಮಗೆ ಪ್ರೇರಣೆ ನೀಡುತ್ತದೆ” ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಅನೇಕ ನಾಯಕರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸಿದರು.
“ಸರ್ದಾರ್ ಪಟೇಲ್ ಅವರ ಜೀವನ ಮತ್ತು ವ್ಯಕ್ತಿತ್ವವು ತುಂಬಾ ವಿಸ್ತಾರವಾಗಿದ್ದು, ಅದನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಸರ್ದಾರ್ ಸಾಹೇಬ್ ಭಾರತದ ಏಕತೆ ಮತ್ತು ಶಕ್ತಿಯ ಸಂಕೇತವಾಗಿದ್ದಾರೆ, ಅವರು ಸಂಕೀರ್ಣ ಸಮಸ್ಯೆಗಳನ್ನು ಪರಿಹರಿಸಿದರು ಮತ್ತು ಯುನೈಟೆಡ್ ಇಂಡಿಯಾವನ್ನು ರೂಪಿಸಿದರು. ಅವರ ಅಚಲ ನಾಯಕತ್ವ ಮತ್ತು ರಾಷ್ಟ್ರೀಯ ಸಮರ್ಪಣೆ ಯಾವಾಗಲೂ ನಮಗೆ ಮಾರ್ಗದರ್ಶನ ನೀಡುತ್ತದೆ” ಎಂದು ಅಮಿತ್ ಶಾ ಟ್ವಿಟ್ ಮಾಡಿದ್ದಾರೆ.
सशक्त, सुदृढ़ और समृद्ध भारत की नींव रखने वाले लौह पुरुष सरदार वल्लभभाई पटेल को उनकी पुण्यतिथि पर शत-शत नमन। उनके दिखाए मार्ग हमें देश की एकता, अखंडता और संप्रभुता की रक्षा करने के लिए सदा प्रेरित करते रहेंगे।
— Narendra Modi (@narendramodi) December 15, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.