ಬೆಂಗಳೂರು: ನೂತನ ಶಿಕ್ಷಣ ನೀತಿ 2020 ಕ್ಕೆ ಪೂರಕವಾಗಿ ಪ್ರಾದೇಶಿಕ ಶಿಕ್ಷಣದಲ್ಲಿ ಕೊಂಕಣಿ ಮಾತೃಭಾಷೆಯನ್ನು ಅಳವಡಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಕೊಂಕಣಿ ಸಾಹಿತ್ಯ ಅಕಾಡೆಮಿ ಮನವಿ ಸಲ್ಲಿಸಿದೆ.
ನೂತನ ಶಿಕ್ಷಣ ನೀತಿಯಲ್ಲಿ ಪ್ರಾದೇಶಿಕ ಭಾಷೆ, ಮಾತೃ ಭಾಷೆಯ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊಂಕಣಿ ಭಾಷೆಯನ್ನು ಸಹ ರಾಜ್ಯದ ಶಿಕ್ಷಣ ಮಾಧ್ಯಮವಾಗಿ ಪರಿಚಯ ಮಾಡುವಂತೆ ಈ ಮನವಿಯಲ್ಲಿ ಅಕಾಡೆಮಿ ತಿಳಿಸಿದೆ. ಐದನೇಯ ತರಗತಿಯ ವರೆಗೆ ಕೊಂಕಣಿ ಭಾಷೆಯಲ್ಲಿ ಕಲಿಕೆಗೆ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುವಂತೆ ಈ ಮನವಿ ಪತ್ರದಲ್ಲಿ ಅಕಾಡೆಮಿ ತಿಳಿಸಿದೆ. ಜೊತೆಗೆ ಬಿ. ಇಡಿ ಮತ್ತು ಎಂ.ಇಡಿ ಶಿಕ್ಷಣಗಳಲ್ಲಿಯೂ ಕೊಂಕಣಿಯನ್ನು ಒಂದು ಭಾಷೆಯಾಗಿ ಪರಿಗಣಿಸುವಂತೆಯೂ ಮುಖ್ಯಮಂತ್ರಿ ಅವರಿಗೆ ಈ ಪತ್ರದ ಮೂಲಕ ಅಕಾಡೆಮಿ ವಿಜ್ಞಾಪನೆ ಮಾಡಿದೆ. ಜೊತೆಗೆ ಕೊಂಕಣಿ ಭಾಷಾ ಶಿಕ್ಷಕರನ್ನು ನೇಮಕ ಮಾಡುವಂತೆಯೂ ವಿನಂತಿಸಿಕೊಂಡಿದೆ. ಇದು ವಿದ್ಯಾರ್ಥಿಗಳಿಗೆ ವಿಷಯಗಳನ್ನು ಸರಿಯಾಗಿ ಮನವರಿಕೆ ಮಾಡಿಕೊಳ್ಳುವುದಕ್ಕೂ ಹೆಚ್ಚು ಪೂರಕವಾಗಲಿದೆ ಎಂದು ಅಕಾಡೆಮಿ ತಿಳಿಸಿದೆ.
ಈಗಾಗಲೇ ಕನ್ನಡ ಮತ್ತು ದೇವನಾಗರಿ ಲಿಪಿಗಳಲ್ಲಿ ಐಚ್ಛಿಕ ವಿಷಯವಾಗಿ ಕೊಂಕಣಿ ಭಾಷೆಯನ್ನು ಹತ್ತನೇ ತರಗತಿ ವರೆಗೆ ಆಸಕ್ತ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಮೂರನೇ ಭಾಷೆಯಾಗಿ ಸೇರ್ಪಡೆ ಮಾಡಲಾಗಿದೆ. ನೂತನ ಶಿಕ್ಷಣ ನೀತಿಗೆ ಅನುಗುಣವಾಗಿ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ನೀಡುವುದಕ್ಕೆ ಪೂರಕವಾಗುವಂತೆ ಕೊಂಕಣಿ ಮಾಧ್ಯಮಗಳನ್ನು ಆರಂಭಿಸಿ. ಮುಂದಿನ ದಿನಗಳಲ್ಲಿ ಇದು ಉನ್ನತ ವಿದ್ಯಾಭ್ಯಾಸದ ಸಂದರ್ಭದಲ್ಲಿಯೂ ವಿದ್ಯಾರ್ಥಿಗಳಿಗೆ ನೆರವಾಗಲಿದೆ ಎಂದು ಅಕಾಡೆಮಿ ತನ್ನ ಪತ್ರದಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.