ಗೋಕಾಕ್: ಆರ್ಟ್ ಆಫ್ ಲಿವಿಂಗ್ನ ಮುಖ್ಯಸ್ಥ ಶ್ರೀ ರವಿಶಂಕರ್ ಗುರೂಜಿ ಅವರನ್ನು ‘ಕಾಯಕ ಶ್ರೀ’ ಪುರಸ್ಕಾರಕ್ಕೆ ಗೋಕಾಕ್ನ ಶೂನ್ಯ ಸಂಪಾದನಾ ಮಠ ಆಯ್ಕೆ ಮಾಡಿದೆ.
ಲಿಂಗೈಕ್ಯರಾದ ಶ್ರೀ ಬಸವ ಸ್ವಾಮೀಜಿ ಅವರ ಪುಣ್ಯ ಸ್ಮರಣೆಯ ಅಂಗವಾಗಿ, 16 ನೇ ಶರಣ ಸಂಸ್ಕೃತಿ ಉತ್ಸವದಲ್ಲಿ ಈ ಪುರಸ್ಕಾರವನ್ನು ಪ್ರದಾನಿಸಿ ಗೌರವಿಸಲಾಗುವುದಾಗಿ ಮಠದ ಮೂಲಗಳು ಮಾಹಿತಿ ನೀಡಿವೆ.
2021 ರ ಫೆ. 1 ರಿಂದ ಫೆ. 4 ರ ವರೆಗೆ ಈ ಉತ್ಸವ ನಡೆಯಲಿದೆ. ಚೆನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಈ ಕಾರ್ಯಕ್ರಮ ನೆರವೇರಲಿದ್ದು, ಮೊದಲ ದಿನದ ಸಮಾರಂಭದಲ್ಲಿ ರವಿಶಂಕರ್ ಗುರೂಜಿ ಅವರಿಗೆ ಈ ಪುರಸ್ಕಾರ ಪ್ರದಾನಿಸಲಾಗುವುದು ಎಂದು ಮಠದ ಪೀಠಾಧಿಪತಿ ಶ್ರೀ ಮುರುಘ ರಾಜೇಂದ್ರ ಸ್ವಾಮೀಜಿ ಮಾಹಿತಿ ನೀಡಿದ್ದಾರೆ. ಈ ಪುರಸ್ಕಾರವು 1 ಲಕ್ಷ ರೂ. ನಗದನ್ನು ಒಳಗೊಂಡಿದೆ.
ಕಳೆದ ಬಾರಿ ಖ್ಯಾತ ಗಾಯಕ, ಕೆಲ ದಿನಗಳ ಹಿಂದಷ್ಟೇ ನಿಧನರಾದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಮತ್ತು ಭಾರತದ ಕ್ಷಿಪಣಿ ಮಹಿಳೆ ಡಾ ತೆಸ್ಸಿ ಥಾಮಸ್ ಅವರಿಗೆ ಈ ಪುರಸ್ಕಾರ ನೀಡಿ ಗೌರವಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.