ಬೆಂಗಳೂರು: ಇಂದು ವಿಧಾನ ಪರಿಷತ್ನಲ್ಲಿ ನಡೆದ ಕೋಲಾಹಲಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೇಸರ ವ್ಯಕ್ತಪಡಿಸಿದ್ದು, ಉಪಸಭಾಪತಿಗಳ ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಿದ ಘಟನೆ ದೇಶದಲ್ಲಿ ಇದೇ ಮೊದಲ ಬಾರಿಗೆ ಸಂಭವಿಸಿದೆ ಎಂದು ನುಡಿದಿದ್ದಾರೆ.
ಕಾಂಗ್ರೆಸ್ನ ಇಂತಹ ದುರ್ವರ್ತನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಇಂದಿನ ಘಟನೆ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ಬಿಂಬಿಸಿದೆ. ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವಕ್ಕೆ ಚ್ಯುತಿ ತರುವ ಕೆಲಸವನ್ನು ಮಾಡಿದೆ. ಸಭಾಪತಿಗಳ ವಿರುದ್ಧ ಜೆಡಿಎಸ್ ಸಹ ಅವಿಶ್ವಾಸ ನಿರ್ಣಯಕ್ಕೆ ಬಹಿರಂಗ ಬೆಂಬಲ ನೀಡಿದೆ. ಹೀಗಾಗಿ ಪ್ರತಾಪ್ ಚಂದ್ರ ಶೆಟ್ಟಿ ಅವರಿಂದ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ರಾಜೀನಾಮೆ ಕೊಡಿಸಲಿ ಎಂದು ತಿಳಿಸಿದ್ದಾರೆ.
ಒಂದು ಬಾರಿ ಸಭಾಪತಿಗೆ ಅವಿಶ್ವಾಸ ನಿರ್ಣಯದ ನೊಟೀಸ್ ನೀಡಿದರೆ, ಬಳಿಕ ಆ ಸ್ಥಾನದಲ್ಲಿ ಕುಳಿತುಕೊಳ್ಳುವ ಅರ್ಹತೆ ಕಳೆದುಕೊಳ್ಳುತ್ತಾರೆ. ಈ ವಿಚಾರ ಎಲ್ಲರಿಗೂ ತಿಳಿದಿರುವಂತಹದ್ದೇ. ಉಪಸಭಾಪತಿಗಳನ್ನು ಕೂರಿಸುವುದಾಗಿ ನಿನ್ನೆಯೇ ತಿಳಿಸಲಾಗಿತ್ತು. ಆದರೂ ಇಂದು ಕಾಂಗ್ರೆಸ್ ಇಂತಹ ಹೀನ ಮನಸ್ಥಿತಿ ತೋರಿರುವುದು ಅವರು ಪ್ರಜಾಪ್ರಭುತ್ವಕ್ಕೆ ಬೆಲೆ ನೀಡುತ್ತಿಲ್ಲ ಎಂಬುದಕ್ಕೆ ಸಾಕ್ಷಿ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಕಾಂಗ್ರೆಸ್ನ ಈ ನಡವಳಿಕೆಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ರಾಜ್ಯಪಾಲರಿಗೆ ದೂರು ನೀಡುವುದಾಗಿಯೂ ಮುಖ್ಯಮಂತ್ರಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.