ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ವಿವಾಹ ವಿಚ್ಛೇದನಗಳಲ್ಲಿ ಏಕರೂಪದ ನಿಯಮವನ್ನು ವಿಧಿಸುವ ಬಗ್ಗೆ ಸುಪ್ರೀಂಕೋರ್ಟ್ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದೆ.
ವಿವಿಧ ವೈಯಕ್ತಿಕ ಕಾನೂನುಗಳಲ್ಲಿನ ವೈಪರೀತ್ಯಗಳನ್ನು ತೆಗೆದುಹಾಕಲು ಮತ್ತು ಏಕರೂಪದ ವ್ಯವಸ್ಥೆಯನ್ನು ಜಾರಿಗೆ ತರಲು ವಿಚ್ಛೇದನ ಕಾನೂನುಗಳ ವಿಷಯದಲ್ಲಿ ಏಕರೂಪದ ಸಂಹಿತೆಯನ್ನು ರೂಪಿಸುವುದನ್ನು ಪರಿಗಣಿಸುವುದಾಗಿ ಬುಧವಾರ ಸುಪ್ರೀಂಕೋರ್ಟ್ ಹೇಳಿದೆ.
ವಕೀಲ ಮತ್ತು ಬಿಜೆಪಿ ಸದಸ್ಯ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ದೇಶಾದ್ಯಂತದ ಎಲ್ಲ ಜನರು ತಮ್ಮ ಧರ್ಮವನ್ನು ಲೆಕ್ಕಿಸದೆ ವಿಚ್ಛೇದನಕ್ಕೆ ಏಕರೂಪದ ನಿಯಮ ಹೊಂದುವ ಇಚ್ಛೆ ಹೊಂದಿದ್ದಾರೆ. ವೈಯಕ್ತಿಕ ಕಾನೂನುಗಳಲ್ಲಿನ ಪೂರ್ವಾಗ್ರಹಗಳನ್ನು ತೆಗೆದುಹಾಕಲು ಮತ್ತು ಧರ್ಮ, ಜನಾಂಗ, ಜಾತಿ, ಲಿಂಗ ಅಥವಾ ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯವಿಲ್ಲದೆ ವಿಚ್ಛೇದನದ ಎಲ್ಲಾ ಪ್ರಕರಣಗಳಿಗೆ ಅನ್ವಯಿಸಬೇಕಾದ ಏಕರೂಪದ ಸಂಹಿತೆಯನ್ನು ತರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕೆಂದು ಅರ್ಜಿಯಲ್ಲಿ ಕೋರಿದ್ದರು .
ಈ ವಿಷಯದ ಬಗ್ಗೆ ಗೃಹ ಸಚಿವಾಲಯ ಮತ್ತು ಕಾನೂನು ಸಚಿವಾಲಯದ ಪ್ರತಿಕ್ರಿಯೆಯನ್ನು ಸುಪ್ರೀಂಕೋರ್ಟ್ ಕೋರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.