ಕೋಲ್ಕತ್ತಾ: 2021ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆಗೂ ಮುನ್ನ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೆ ದೊಡ್ಡ ಹೊಡೆತ ಬಿದ್ದಿದೆ. ಟಿಎಂಸಿಯ ಬಂಡಾಯ ನಾಯಕ ಸುವೇಂದು ಅಧಿಕಾರಿ ಬುಧವಾರ ಪಶ್ಚಿಮ ಬಂಗಾಳ ವಿಧಾನಸಭೆಗೆ ರಾಜೀನಾಮೆ ನೀಡಿದ್ದಾರೆ.
ಮೂಲಗಳ ಪ್ರಕಾರ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಪುರ್ಬಾ ಮದಿನಿಪುರ ಜಿಲ್ಲೆಯ ನಂದಿಗ್ರಾಮ್ ಕ್ಷೇತ್ರದ ಶಾಸಕರಾದ ಸುವೇಂದು ಅಧಿಕಾರಿಯವರು ನವೆಂಬರ್ನಲ್ಲಿ ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಅವರು ಟಿಎಂಸಿ ಪಕ್ಷದ ನಾಯಕತ್ವದೊಂದಿಗೆ ಸ್ವಲ್ಪ ಸಮಯದಿಂದ ಅಂತರವನ್ನು ಕಾಯ್ದುಕೊಳ್ಳುತ್ತಾ ಬಂದಿದ್ದಾರೆ.
ಅಧಿಕಾರಿಯವರು ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಡಿಸೆಂಬರ್ 15 ರಂದು ಬಿಜೆಪಿ ಸಂಸದ ನಿಸಿತ್ ಪ್ರಮಾಣಿಕ್ ಹೇಳಿದ್ದಾರೆ.
ಸುವೇಂದು ಅಧಿಕಾರಿ ಜನಪ್ರಿಯ ನಾಯಕ ಮತ್ತು ತಮ್ಮ ಕ್ಷೇತ್ರದ ಸುಧಾರಣೆಗೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ಅಂತಹ ನಾಯಕ ಬಿಜೆಪಿಗೆ ಸೇರಿದರೆ ಪಕ್ಷವು ಸಮೃದ್ಧವಾಗಲಿದೆ ಎಂದಿದ್ದಾರೆ
ಸುವೇಂದು ಅಧಿಕಾರಿ ಬಿಜೆಪಿಗೆ ಸೇರ್ಪಡೆಗೊಂಡರೆ, ದಕ್ಷಿಣ ಬಂಗಾಳ, ಹಳೆಯ ಮಿಡ್ನಾಪೋರ್, ಪಶ್ಚಿಮ ಮಿಡ್ನಾಪೋರ್, ಮತ್ತು ಮುರ್ಷಿದಾಬಾದ್ನಂತಹ ಅನೇಕ ಪ್ರದೇಶಗಳಲ್ಲಿ ಬಿಜೆಪಿಗೆ ಭಾರೀ ಲಾಭವಾಗಲಿದೆ ಎಂದು ಅಂದಾಜಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.