ಲಕ್ನೋ: ದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಲೇ ಇವೆ. ಉತ್ತರಪ್ರದೇಶದ ಬಿಜ್ನೋರ್ನಲ್ಲಿ 19 ವರ್ಷದ ಸಾಕಿಬ್ ಎಂಬಾತ 14 ವರ್ಷದ ದಲಿತ ಹುಡುಗಿಯನ್ನು ಬಲವಂತದ ಧಾರ್ಮಿಕ ಮತಾಂತರಕ್ಕೆ ಪ್ರಚೋದಿಸಲು ತನ್ನ ಧಾರ್ಮಿಕ ಗುರುತನ್ನು ಮರೆಮಾಚಿದ್ದಾನೆ.
ವರದಿಗಳ ಪ್ರಕಾರ, ಈತನ ವಿರುದ್ಧ ಹೊಸದಾಗಿ ಜಾರಿಗೆ ತರಲಾದ ಬಲವಂತದ ಮತಾಂತರ ತಡೆ ಸುಗ್ರೀವಾಜ್ಞೆ 2020 ಮತ್ತು ಐಪಿಸಿಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಎಸ್ಸಿ / ಎಸ್ಟಿ ಕಾಯ್ದೆಯಡಿ ಕೂಡ ಪ್ರಕರಣ ದಾಖಲಾಗಿದೆ.
ಪೊಲೀಸರ ಪ್ರಕಾರ, ಮೊಹಮ್ಮದ್ ಸಾಕಿಬ್ ತನ್ನ ಹೆಸರನ್ನು ಸೋನು ಎಂದು ಹೇಳಿ ಅಪ್ರಾಪ್ತ ದಲಿತ ಹುಡುಗಿಯನ್ನು ಪ್ರೀತಿಸುವ ನಾಟಕವಾಡಿದ್ದಾನೆ. ಡಿಸೆಂಬರ್ 14ರಂದು ಇಬ್ಬರೂ ಓಡಿ ಹೋಗುವ ಪ್ರಯತ್ನ ನಡೆಸಿದ್ದಾರೆ. ಆದರೆ ದಾರಿ ಮಧ್ಯೆ ಪೊಲೀಸರು ಇವರನ್ನು ಬಂಧಿಸಿದ್ದಾರೆ.
ಪೊಲೀಸರ ವಿಚಾರಣೆ ವೇಳೆ, ಸಾಕಿಬ್ ತನ್ನ ಧಾರ್ಮಿಕ ಗುರುತನ್ನು ಮೊದಲು ಮರೆಮಾಚಿದ್ದಾನೆ, ನಂತರ ನನಗೆ ಇಸ್ಲಾಂಗೆ ಮತಾಂತರಗೊಳ್ಳುವಂತೆ ಬಲವಂತಪಡಿಸಿದ್ದಾನೆ ಎಂದು ಬಾಲಕಿಯು ಆರೋಪಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಹುಡುಗಿಯ ಪೋಷಕರ ಪ್ರಕಾರ, ಹುಡುಗಿ ಧಂಪೂರಿನ ಶಾಲೆಯಲ್ಲಿ ಅಧ್ಯಯನ ಮಾಡುತ್ತಿದ್ದಳು ಮತ್ತು ಸಾಕಿಬ್ ಶಾಲೆ ಬಿಟ್ಟ ನಂತರ ಅವಳನ್ನು ಹಿಂಬಾಲಿಸುತ್ತಿದ್ದ. ಆತ ಹಿಂದೂ ಎಂದು ನಟಿಸುವ ಮೂಲಕ ಅವಳನ್ನು ಆಮಿಷಕ್ಕೊಳಪಡಿಸಿ ಪ್ರೀತಿಸುವ ನಾಟಕ ಮಾಡಿದ್ದಾನೆ.
ಈ ಪ್ರಕರಣ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳಿಗೆ ಜ್ವಲಂತ ಉದಾಹರಣೆ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.