ನವದೆಹಲಿ: ಕೇಂದ್ರದ ಮೂರು ಹೊಸ ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ಭಾರೀ ರೈತರು ಪ್ರತಿಭಟನೆ ನಡೆಯುತ್ತಿರುವ ಈ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಧ್ಯಪ್ರದೇಶದ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ಅವರ ಭಾಷಣ ಮಧ್ಯಾಹ್ನ 2 ಗಂಟೆಗೆ ವಿಡಿಯೋ ಲಿಂಕ್ ಮೂಲಕ ಪ್ರಾರಂಭವಾಗಲಿದ್ದು, ರಾಜ್ಯದ ಸುಮಾರು 23,000 ಗ್ರಾಮಸ್ಥರಿಗೆ ಮೋದಿ ಭಾಷಣ ತಲುಪಲಿದೆ ಎನ್ನಲಾಗಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಮಸೂದೆಗಳು ರೈತರ ಹಿತಾಸಕ್ತಿಯನ್ನು ಹೊಂದಿದೆ. ರೈತರಿಗೆ ಹೆಚ್ಚಿನ ಪ್ರಯೋಜನ ತಂದುಕೊಡಲಿದೆ, ಮಧ್ಯವರ್ತಿಗಳಿಂದ ಅವರಿಗೆ ಸ್ವಾತಂತ್ರ್ಯ ನೀಡಲಿದೆ ಎಂದು ಪ್ರಧಾನಿ ಮೋದಿ ಈಗಾಗಲೇ ಹಲವು ಬಾರಿ ಹೇಳಿದ್ದಾರೆ.
ಪ್ರತಿಪಕ್ಷಗಳು ತಮ್ಮ ಅಧಿಕಾರವಿದ್ದಾಗ ಈ ಮಸೂದೆಗಳನ್ನು ಸಮರ್ಥನೆ ಮಾಡಿದ್ದವು ಆದರೆ ಈಗ ವಿರೋಧಿಸುತ್ತಿವೆ. ಈ ಮೂಲಕ ರೈತರಲ್ಲಿ ಗೊಂದಲವನ್ನು ಮೂಡಿಸುತ್ತಿವೆ ಎಂದಿದ್ದಾರೆ.
ಮಧ್ಯಪ್ರದೇಶದ ರೈತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲೂ ಅವರು ಈ ಮಾತಗಳನ್ನು ಪುನರುಚ್ಛರಿಸಿ ಕೃಷಿ ಕಾನೂನುಗಳನ್ನು ಬಲವಾಗಿ ಸಮರ್ಥನೆ ಮಾಡಿಕೊಳ್ಳುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.