ನವದೆಹಲಿ: ರೈತ ಹಿತಾಸಕ್ತಿಯನ್ನು ಹೊಂದಿರುವ ಕೃಷಿ ಸುಧಾರಣೆಗಳು ಭಾರತೀಯ ಕೃಷಿಯಲ್ಲಿ ಹೊಸ ಅಧ್ಯಾಯಕ್ಕೆ ಅಡಿಪಾಯವನ್ನು ಹಾಕಲಿದೆ ಮತ್ತು ದೇಶದ ರೈತರನ್ನು ಹೆಚ್ಚು ಸ್ವತಂತ್ರವಾಗಿಸುತ್ತದೆ ಮತ್ತು ಅವರಿಗೆ ಹೆಚ್ಚಿನ ಅಧಿಕಾರವನ್ನು ನೀಡುತ್ತದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ರೈತರಿಗೆ ಪತ್ರ ಬರೆದಿರುವ ತೋಮರ್, “ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮಂತ್ರದೊಂದಿಗೆ ಮುಂದೆ ಸಾಗುತ್ತಾ ನರೇಂದ್ರ ಮೋದಿ ಸರ್ಕಾರ ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ಸೇವೆ ಸಲ್ಲಿಸಲು ಪ್ರಯತ್ನಿಸಿದೆ. ಕಳೆದ ಆರು ವರ್ಷಗಳ ಇತಿಹಾಸ ಇದಕ್ಕೆ ಸಾಕ್ಷಿಯಾಗಿದೆ” ಎಂದಿದ್ದಾರೆ.
“ರೈತರು ಮತ್ತು ಅವರ ಸಂಘಟನೆಗಳೊಂದಿಗೆ ನಾನು ನಿರಂತರ ಸಂಪರ್ಕದಲ್ಲಿದ್ದೇವೆ. ಮತ್ತು ಅನೇಕ ರೈತ ಸಂಘಟನೆಗಳು ಸುಧಾರಣೆಗಳನ್ನು ಸ್ವಾಗತಿಸಿ ಸಂತೋಷ ವ್ಯಕ್ತಪಡಿಸಿವೆ. ಅನೇಕ ರೈತರು ಹೊಸ ಕಾನೂನುಗಳ ಲಾಭ ಪಡೆಯಲು ಪ್ರಾರಂಭಿಸಿದ್ದಾರೆ, ಆದರೆ ಇನ್ನೊಂದು ಕಡೆ ರೈತರಲ್ಲಿ ಗೊಂದಲ ಸೃಷ್ಟಿಯಾಗಿದೆ ಮತ್ತು ಕೃಷಿ ಸಚಿವರಾಗಿ ಅದನ್ನು ನಿವಾರಿಸುವುದು ನನ್ನ ಜವಾಬ್ದಾರಿಯಾಗಿದೆ” ಎಂದಿದ್ದಾರೆ.
ಹೊಸ ಕಾನೂನುಗಳ ಅನುಷ್ಠಾನದ ನಂತರ ಎಂಎಸ್ಪಿಯಲ್ಲಿ ಸರ್ಕಾರದ ಖರೀದಿ ಎಲ್ಲಾ ದಾಖಲೆಗಳನ್ನು ಮುರಿದಿದೆ ಎಂದು ತೋಮರ್ ಹೇಳಿದ್ದಾರೆ. ಎಂಎಸ್ಪಿ ಖರೀದಿಯಲ್ಲಿ ಮತ್ತು ಹೆಚ್ಚುತ್ತಿರುವ ಖರೀದಿ ಕೇಂದ್ರಗಳಲ್ಲಿ ಸರ್ಕಾರ ಹೊಸ ದಾಖಲೆಗಳನ್ನು ಮಾಡುತ್ತಿರುವಾಗ, ಎಂಎಸ್ಪಿ ನಿಲ್ಲಿಸಲಾಗುವುದು ಎಂದು ಕೆಲವರು ರೈತರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಎಂಎಸ್ಪಿ ಮುಂದುವರಿಯುತ್ತದೆ ಎಂದು ತೋಮರ್ ಪುನರುಚ್ಛರಿಸಿದರು. ಕಳೆದ ಆರು ವರ್ಷಗಳಲ್ಲಿ ರೈತರಿಗೆ ಬೀಜಗಳಿಂದ ಹಿಡಿದು ಮಾರುಕಟ್ಟೆಯವರೆಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದರು. ಮಂಡಿಗಳು ಕಾರ್ಯನಿರ್ವಹಿಸುತ್ತಿದೆ ಮತ್ತು ಮುಂದೆಯೂ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತದೆ ಮತ್ತು ಸರ್ಕಾರವು ಎಪಿಎಂಸಿಯನ್ನು ಬಲಪಡಿಸುತ್ತಿದೆ ಮತ್ತು ಮಂಡಿಗಳನ್ನು ಆಧುನೀಕರಿಸಲಾಗುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.