ಭೋಪಾಲ್: ಕೃಷಿ ಸುಧಾರಣೆಗಳನ್ನು ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ತರಲಾಗಿದೆ. ಕಳೆದ 6 ವರ್ಷಗಳಲ್ಲಿ, ನಮ್ಮ ಸರ್ಕಾರ ಪ್ರತಿ ರೈತರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಧ್ಯಪ್ರದೇಶದ ರೈತ ಸಮಾವೇಶವನ್ನು ಉದ್ದೇಶಿಸಿ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಅವರು, ನಮ್ಮ ಸರ್ಕಾರ ಎಂಎಸ್ಪಿ ಬಗ್ಗೆ ಅತ್ಯಂತ ಗಂಭೀರವಾಗಿದೆ. ಒಂದು ವೇಳೆ ಎಂಎಸ್ಪಿ ತೆಗೆಯುವ ಆಲೋಚನೆ ಇದ್ದಿದ್ದರೆ ಸ್ವಾಮಿನಾಥನ್ ವರದಿಯನ್ನು ನಾವು ಅನುಷ್ಠಾನಕ್ಕೆ ತರುತ್ತಲೇ ಇರಲಿಲ್ಲ ಎಂದಿದ್ದಾರೆ.
ಈ ಕೃಷಿ ಸುಧಾರಣಾ ಕಾನೂನುಗಳು ರಾತ್ರೋರಾತ್ರಿ ಜಾರಿಗೊಂಡಿಲ್ಲ. ಪ್ರತಿ ಸರ್ಕಾರವು ಕಳೆದ 20-22 ವರ್ಷಗಳಿಂದ ಇದರ ಬಗ್ಗೆ ವಿಸ್ತೃತ ಚರ್ಚೆ ನಡೆಸಿದೆ. ರೈತ ಸಂಘಟನೆಗಳು ಚರ್ಚೆ ನಡೆಸಿವೆ. ದೇಶದ ರೈತರು, ರೈತರ ಸಂಘಟನೆಗಳು, ಕೃಷಿ ತಜ್ಞರು, ಕೃಷಿ ಅರ್ಥಶಾಸ್ತ್ರಜ್ಞರು, ಕೃಷಿ ವಿಜ್ಞಾನಿಗಳು, ನಮ್ಮ ದೇಶದ ಪ್ರಗತಿಪರ ರೈತರು ಸಹ ಕೃಷಿ ಕ್ಷೇತ್ರದಲ್ಲಿ ಸುಧಾರಣೆಗಾಗಿ ಸಲಹೆ ನೀಡುತ್ತಾ ಬಂದಿದ್ದಾರೆ ಎಮದಿದ್ದಾರೆ.
ಕೋಲ್ಡ್ ಸ್ಟೋರೇಜ್ ಮತ್ತು ಗೋದಾಮುಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ದೇಶದ ವ್ಯವಹಾರಗಳು ಮತ್ತು ಉದ್ಯಮಗಳು ತಮ್ಮ ಹೂಡಿಕೆಯನ್ನು ಹೆಚ್ಚಿಸಲು ಮತ್ತು ಆಧುನಿಕ ಆಹಾರ ವ್ಯವಸ್ಥೆಗಳನ್ನು, ಕೋಲ್ಡ್ ಸ್ಟೋರೇಜ್, ಹೊಸ ಆಹಾರ ಸಂಸ್ಕರಣಾ ಉದ್ಯಮಗಳನ್ನು ಸ್ಥಾಪಿಸುವಲ್ಲಿ ಸಹಕರಿಸಬೇಕೆಂದು ಪ್ರಧಾನಿ ಆಗ್ರಹಿಸಿದರು.
ಆಲಿಕಲ್ಲು ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ಮಧ್ಯಪ್ರದೇಶದ 35 ಲಕ್ಷ ರೈತರಿಗೆ 1600 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತಿದ್ದು, ಅದನ್ನು ನೇರವಾಗಿ ತಮ್ಮ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತಿದೆ ಎಂದು ಅವರು ಹೇಳಿದರು.
ವಿರೋಧ ಪಕ್ಷಗಳ ಮೇಲೆ ತೀವ್ರವಾಗಿ ವಾಗ್ದಾಳಿ ನಡೆಸಿದ ಮೋದಿ, ವಿರೋಧ ಪಕ್ಷಗಳು ತಮ್ಮ ರಾಜಕೀಯಕ್ಕಾಗಿ ರೈತರನ್ನು ಬಳಸಿಕೊಂಡಿವೆ. ದೇಶದ ಎಲ್ಲಾ ರಾಜಕೀಯ ಪಕ್ಷಗಳ ಹಳೆಯ ಪ್ರಣಾಳಿಕೆಗಳನ್ನು ಇಂದು ನೋಡಿದರೆ, ನಾವು ತಂದ ಕೃಷಿ ಸುಧಾರಣೆಗಳು ಅವರಿಗಿಂತ ಭಿನ್ನವಾಗಿಲ್ಲ ಎಂಬುದು ಗೊತ್ತಾಗುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.