ಬೆಂಗಳೂರು: ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ದೀರ್ಘ ಸಮಯದಿಂದ ಮುಚ್ಚಲ್ಪಟ್ಟಿರುವ ಶಾಲೆಗಳನ್ನು ಮತ್ತೆ ತೆರೆಯಲು ಕಾಲ ಕೂಡಿ ಬಂದಿದೆ. ಶಾಲೆ-ಕಾಲೇಜುಗಳು ಜನವರಿ 1ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
2021ರ ಜನವರಿ 1ನೇ ತಾರೀಖಿನಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗಲಿದೆ. 6ರಿಂದ 9ನೇ ತರಗತಿಯವರೆಗೆ ವಿದ್ಯಾಗಮ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಂದು ಘೋಷಿಸಿದ್ದಾರೆ.
ಶಾಲೆ-ಕಾಲೇಜುಗಳ ಪ್ರಾರಂಭ ಕುರಿತು ಪರಿಸ್ಥಿತಿ ಅವಲೋಕಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಸಿದ ಸಭೆಯಲ್ಲಿ, ಜನವರಿ 1ರಂದು 10 ಮತ್ತು ಪಿಯುಸಿ ತರಗತಿ ಪ್ರಾರಂಭಿಸಿ 15 ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿಗಳನ್ನು ಮುಂದಿನ ದಿನಗಳಲ್ಲಿ ಪ್ರಾರಂಭಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಲಾಗಿದೆ.
2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ; ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ. ಮುಖ್ಯಮಂತ್ರಿ @BSYBJP ಅಧ್ಯಕ್ಷತೆಯ ಇಂದಿನ ಸಭೆಯಲ್ಲಿ ತೀರ್ಮಾನ.
— CM of Karnataka (@CMofKarnataka) December 19, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.