ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆಯ (ಜಿಎಚ್ಎಂಸಿ) ಹೊಸದಾಗಿ ಚುನಾಯಿತರಾದ ಬಿಜೆಪಿ ಕಾರ್ಪೊರೇಟರ್ಗಳು ಚಾರ್ಮಿನಾರ್ ಪಕ್ಕದ ಭಾಗ್ಯಲಕ್ಷ್ಮಿ ದೇವಸ್ಥಾನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿಯ ತೆಲಂಗಾಣ ಘಟಕದ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ 48 ಕಾರ್ಪೋರೇಟರ್ಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ವೇಳೆ ಕಾರ್ಪೋರೇಟರ್ಗಳು, ಭ್ರಷ್ಟಾಚಾರದಿಂದ ದೂರವಿರಲು, ಜನರಿಗೆ ಸೇವೆ ಸಲ್ಲಿಸಲು ಮತ್ತು ಪಕ್ಷದ ತತ್ವಗಳಿಗೆ ಬದ್ಧರಾಗಿರುವುದಾಗಿ ಪ್ರತಿಜ್ಞೆ ಮಾಡಿದರು. ಭಾಗ್ಯಲಕ್ಷ್ಮಿ ದೇವಸ್ಥಾನವು ಜಿಎಚ್ಎಂಸಿ ಚುನಾವಣೆಯ ಕೇಂದ್ರಬಿಂದುವಾಗಿತ್ತು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಾರ್ಥನೆ ಸಲ್ಲಿಸಲು ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಸಂಜಯ್ ಕುಮಾರ್ ಮಾತನಾಡಿ, “ಜಿಎಚ್ಎಂಸಿ ಚುನಾವಣೆಯ ಸಂದರ್ಭದಲ್ಲಿ ಅನೇಕ ಬಿಜೆಪಿ ನಾಯಕರು ಭಾಗ್ಯಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಜಿಎಚ್ಎಂಸಿ ಚುನಾವಣೆ ಮುಗಿದ ನಂತರ, ಚುನಾವಣೆಯಲ್ಲಿ ಗೆದ್ದ ಬಿಜೆಪಿ ಕಾರ್ಪೋರೇಟರ್ಗಳು ಎಲ್ಲರೂ ದೇವಸ್ಥಾನಕ್ಕೆ ಭೇಟಿ ನೀಡಿ ಭಾಗ್ಯಲಕ್ಷ್ಮಿ ದೇವಿಯ ಮುಂದೆ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ನಾವು ದೇವಿಗೆ ಭರವಸೆ ನೀಡಿದ್ದೆವು. ಆದ್ದರಿಂದ, ಇಂದು ಎಲ್ಲಾ 48 ಕಾರ್ಪೋರೆಟರ್ಗಳು ಮತ್ತು ಶಾಸಕ ರಾಜಾ ಸಿಂಗ್ ಅವರೊಂದಿಗೆ ದೇವಿಗೆ ನಮ್ಮ ಪ್ರಾರ್ಥನೆಗಳನ್ನು ಅರ್ಪಿಸಿದ್ದೇವೆ” ಎಂದಿದ್ದಾರೆ.
“ಟಿಆರ್ಎಸ್ ಅಧ್ಯಕ್ಷ ಮತ್ತು ತೆಲಂಗಾಣ ಸಿಎಂ ಕೆಸಿಆರ್ ಅವರು ಎಐಐಎಂಐಎಂ ಕೈ ಜೋಡಿಸುತ್ತಾ ಹೈದರಾಬಾದ್ ನಗರವನ್ನು ನಾಶ ಮಾಡಿದರು. ಈ ಸರ್ಕಾರದಿಂದ ಬೇಸರಗೊಂಡ ಜನರು ಬದಲಾವಣೆಯನ್ನು ಬಯಸುತ್ತಿದ್ದರು ಮತ್ತು ಜಿಎಚ್ಎಂಸಿ ಚುನಾವಣೆಯಲ್ಲಿ ಬಿಜೆಪಿ ಕಾರ್ಪೊರೇಟರ್ಗಳಿಗೆ ಮತ ಹಾಕಿದರು ”ಎಂದು ಅವರು ಹೇಳಿದ್ದಾರೆ.
ದೇವಾಲಯದಲ್ಲಿ ದೇವಿ ದರ್ಶನ ನೀಡಿದ ನಂತರ ಬಿಜೆಪಿ ಶಾಸಕ ರಾಜಾ ಸಿಂಗ್ ಅವರು ಮಾತನಾಡಿ, “ಜಿಎಚ್ಎಂಸಿ ಚುನಾವಣೆಯ ಸಂದರ್ಭದಲ್ಲಿ ಅಮಿತ್ ಶಾ ಭಾಗ್ಯಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ತೆಲಂಗಾಣ ಬಿಜೆಪಿ ರಾಜ್ಯ ಅಧ್ಯಕ್ಷ ಬಂಡಿ ಸಂಜಯ್ ಕೂಡ ಭೇಟಿ ನೀಡಿದ್ದರು. ಮತ್ತು ಇಂದು, ಜಿಎಚ್ಎಂಸಿ ಚುನಾವಣೆಯಲ್ಲಿ ಜಯಗಳಿಸಿದ ಎಲ್ಲಾ 48 ಬಿಜೆಪಿ ಕಾರ್ಪೋರೇಟರ್ಗಳು ಭೇಟಿ ನೀಡಿ ಭಾಗ್ಯಲಕ್ಷ್ಮಿ ದೇವಸ್ಥಾನದ ಮುಂದೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಗರದಲ್ಲಿನ ಭ್ರಷ್ಟಾಚಾರವನ್ನು ಕೊನೆಗೊಳಿಸಲು ಅವರು ಪ್ರಮಾಣ ಸ್ವೀಕರಿಸಿದ್ದಾರೆ. ಚುನಾವಣಾ ಪ್ರಚಾರದ ಸಮಯದಲ್ಲಿ ಅನೇಕರ ಮೇಲೆ ಹಲ್ಲೆ ಮತ್ತು ಕೆಲವರನ್ನು ಜೈಲಿಗೆ ಕಳುಹಿಸಲಾಗಿದ್ದರೂ, ಯಾರೂ ಹಿಂದೆ ಸರಿಯಲಿಲ್ಲ ಮತ್ತು ಪಕ್ಷವು ಜಿಎಚ್ಎಂಸಿಯಲ್ಲಿ 48 ಕಾರ್ಪೊರೇಟರ್ ಸ್ಥಾನಗಳನ್ನು ಗೆದ್ದಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.