ಬೆಂಗಳೂರು: ಇತ್ತೀಚೆಗಷ್ಟೇ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ 17 ಮಂದಿ ಎಸ್ಡಿಪಿಐ ಮತ್ತು ಪಿಎಫ್ಐ ನಾಯಕರು ಮತ್ತು ಕಾರ್ಯಕರ್ತರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸೋದರಳಿಯ ನವೀನ್ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್ ಒಂದನ್ನು ಗುರಿಯಾಗಿಸಿಕೊಂಡು ನಡೆದಿದ್ದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ, ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ, ಪೊಲೀಸರ ಮೇಲೆ ಹಲ್ಲೆ, ಪೊಲೀಸ್ ಠಾಣೆಗಳ ಮೇಲೆ ಕಲ್ಲು ತೂರಾಟ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ಎನ್ಐಎ ತನಿಖೆ ನಡೆಸುತ್ತಿದ್ದು, ಈ ಹಿಂದೆಯೂ ಹಲವರನ್ನು ಬಂಧಿಸಿತ್ತು. ಇದೀಗ ಮತ್ತೆ 17 ಜನರನ್ನು ವಶಕ್ಕೆ ಪಡೆದಿದೆ.
ಸಾಮಾಜಿಕ ಜಾಲತಾಣಗಳನ್ನು ಬಳಸಿ ಈ ಗಲಭೆಗೆ ಸಂಚು ರೂಪಿಸಲಾಗಿತ್ತು ಎಂದು ಎನ್ಐಎ ತನಿಖೆಯಲ್ಲಿ ಬಹಿರಂಗವಾಗಿದೆ. ಜೊತೆಗೆ ಬೇರೆಡೆಯಿಂದ ಜನರನ್ನು ಕರೆತಂದು ಸಂಚು ರೂಪಿಸಿರುವ ಬಗ್ಗೆಯೂ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಮತ್ತೆ 17 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 187 ಜನರನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎನ್ಐಎ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.