ಬೆಂಗಳೂರು: ಎಲೆಕ್ಟ್ರಿಕ್ ವಾಹನ ಉತ್ಪಾದನೆ, ಸೌರಶಕ್ತಿ, ಪವನಶಕ್ತಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ 26,659 ಕೋಟಿ ರೂ. ಹೂಡಿಕೆಯ ಐದು ಪ್ರಸ್ತಾಪಗಳಿಗೆ ಸರ್ಕಾರ ಸಮ್ಮತಿ ಸೂಚಿಸಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ 55 ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ ಐದು ಪ್ರಸ್ತಾವನೆಗಳಿಗೆ ಅನುಮತಿ ನೀಡಿದ್ದು, ಇದರಿಂದಾಗಿ ಸುಮಾರು 13,341 ರಷ್ಟು ಉದ್ಯೋಗ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಸರ್ಕಾರ ತಿಳಿಸಿದೆ.
ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಸ್ಟ್ ಪ್ರೈ. ಲಿ. ಕಂಪೆನಿ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕ ಆರಂಭಿಸಲಿದ್ದು, 14,255 ಕೋಟಿ ಹೂಡಿಕೆ ಮಾಡಲಿದ್ದು, ಸುಮಾರು 867 ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ 1,804 ರಷ್ಟು ಉದ್ಯೋಗ ಸೃಷ್ಟಿಸಲು ಸಾಧ್ಯತೆ ಇರುವ ಲೀಥಿಯಂ ಅಯಾನ್ ಸೆಲ್ ಮತ್ತು ಬ್ಯಾಟರಿ ಉತ್ಪಾದನಾ ಘಟಕವನ್ನು ಆರಂಭಿಸಲು ಇದೇ ಸಂಸ್ಥೆ 6,339 ಕೋಟಿ ರೂ. ಹೂಡಿಕೆ ಮಾಡಲಿದೆ. ಅದರಂತೆ ಚಿಕ್ಕಬಳ್ಳಾಪುರದಲ್ಲಿ ಎಲೆಕ್ಟ್ರಿಕ್ ವಾಹನ ತಯಾರಿಕೆ, ಲೀಥಿಯಂ ಬ್ಯಾಟರಿ ಉತ್ಪಾದನಾ ಘಟಕ ಆರಂಭಿಸಲು 1825 ಕೋಟಿ ರೂ. ಹೂಡಿಕೆ ಮಾಡಲಿದ್ದು, 2210 ಉದ್ಯೋಗ ಸೃಷ್ಟಿಯ ಸಾಧ್ಯತೆ ಇದೆ. ಜಗಳೂರಿನಲ್ಲಿ ಮಿರಾಕ್ಯು ಲಮ್ ಗ್ರೀನ್ ಪವರ್ ಕಂಪನಿಯು ಪವನ, ಸೌರ ವಿದ್ಯುತ್ ಯೋಜನೆಗೆ 1290 ಕೋಟಿ ರೂ. ಹೂಡಿಕೆ ಮಾಡುವುದಾಗಿ ತಿಳಿಸಿದ್ದು, 2820 ಉದ್ಯೋಗ ಸೃಷ್ಟಿಯಾಗುವ ಸೃಷ್ಟಿಯ ಸಾಧ್ಯತೆ ಇದೆ. ಅದರೊಂದಿಗೆ ಸನಾಲಿ ಪವರ್ ಪ್ರೈ. ಲಿ. ಜಗಳೂರಿನಲ್ಲಿ ಪವನ, ಸೌರ ವಿದ್ಯುತ್ ಯೋಜನೆಗೆ 2950 ಕೋಟಿ ರೂ. ಹೂಡಿಕೆ ಮಾಡಲಿದ್ದು, ಸುಮಾರು 5640 ಉದ್ಯೋಗ ಸೃಷ್ಟಿಯಾಗಬಹುದು ಎಂದು ಮೂಲಗಳು ಅಂದಾಜು ಲೆಕ್ಕಾಚಾರ ತಿಳಿಸಿದೆ.
ಅದರಂತೆ ರಾಜ್ಯದಲ್ಲಿ ಉದ್ದಿಮೆ ಆರಂಭಿಸುವವರು ಮೂರು ವರ್ಷಗಳ ಅವಧಿಗೆ ಯಾವುದೇ ಇಲಾಖೆಯ ಅನುಮತಿ ಪಡೆಯಬೇಕಾಗಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.