ನವದೆಹಲಿ: ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಕಾರ್ಯಕ್ರಮಗಳ ಆಯೋಜನೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಈ ಉನ್ನತ ಮಟ್ಟದ ಸಮಿತಿಯು 2021 ರ ಜನವರಿ 23 ರಿಂದ ಒಂದು ವರ್ಷದ ಸ್ಮರಣಾರ್ಥ ಚಟುವಟಿಕೆಗಳನ್ನು ನಿರ್ಧರಿಸಲಿದೆ.
ಉನ್ನತ ಮಟ್ಟದ ಸಮಿತಿಯ ನೇತೃತ್ವವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವಹಿಸಲಿದ್ದಾರೆ. ಸ್ಮರಣಾರ್ಥ ಕಾರ್ಯಗಳು ನೇತಾಜಿ ಗೌರವಾರ್ಥ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಅಪಾರ ಕೊಡುಗೆಗೆ ಕೃತಜ್ಞತೆಯ ಸಂಕೇತವಾಗಿ ನಡೆಯುತ್ತಿದೆ.
ನೇತಾಜಿ ಬೋಸ್ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ, “ವಸಾಹತುಶಾಹಿಯನ್ನು ವಿರೋಧಿಸುವಲ್ಲಿ ತೋರಿದ ಧೈರ್ಯ ಮತ್ತು ಸ್ಮರಣೀಯ ಕೊಡುಗೆಗಾಗಿ ಭಾರತ ಯಾವಾಗಲೂ ಸುಭಾಸ್ ಚಂದ್ರ ಬೋಸ್ ಅವರಿಗೆ ಕೃತಜ್ಞರಾಗಿರಬೇಕು. ಪ್ರತಿಯೊಬ್ಬ ಭಾರತೀಯನು ಘನತೆಯುತ ಜೀವನವನ್ನು ನಡೆಸುವುದನ್ನು ಖಾತ್ರಿಪಡಿಸಿಕೊಳ್ಳುವಲ್ಲಿ ತನ್ನನ್ನು ತಾನು ಬದ್ಧರಾಗಿಸಿದರು. ನೇತಾಜಿ ಅವರು ಬೌದ್ಧಿಕ ಪರಾಕ್ರಮ ಮತ್ತು ಸಾಂಸ್ಥಿಕ ಕೌಶಲ್ಯಕ್ಕೂ ಹೆಸರುವಾಸಿಯಾಗಿದ್ದರು. ಅವರ ಆದರ್ಶಗಳನ್ನು ಈಡೇರಿಸಲು ಮತ್ತು ಬಲವಾದ ಭಾರತವನ್ನು ರಚಿಸಲು ನಾವು ಬದ್ಧರಾಗಿದ್ದೇವೆ.” ಎಂದಿದ್ದಾರೆ.
ಉನ್ನತ ಮಟ್ಟದ ಸ್ಮರಣಾರ್ಥ ಸಮಿತಿಯು ತಜ್ಞರು, ಇತಿಹಾಸಕಾರರು, ಲೇಖಕರು, ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಕುಟುಂಬ ಸದಸ್ಯರು ಮತ್ತು ಆಜಾದ್ ಹಿಂದ್ ಫೌಜ್ / ಐಎನ್ಎಗೆ ಸಂಬಂಧಿಸಿದ ಪ್ರಖ್ಯಾತ ವ್ಯಕ್ತಿಗಳನ್ನು ಒಳಗೊಂಡಿರುತ್ತದೆ. ದೆಹಲಿ, ಕೋಲ್ಕತಾ ಮತ್ತು ನೇತಾಜಿ ಮತ್ತು ಆಜಾದ್ ಹಿಂದ್ ಫೌಜ್ಗೆ ಸಂಬಂಧಿಸಿದ ಇತರ ಸ್ಥಳಗಳಲ್ಲಿ ಭಾರತ ಮತ್ತು ವಿದೇಶಗಳಲ್ಲಿ ನಡೆಯುವ ಸ್ಮರಣಾರ್ಥ ಚಟುವಟಿಕೆಗಳಿಗೆ ಸಮಿತಿ ಮಾರ್ಗದರ್ಶನ ನೀಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.