ನವದೆಹಲಿ: ಮುಂಬರುವ ಕೇಂದ್ರ ಬಜೆಟ್ 2021-22 ಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ನವದೆಹಲಿಯಲ್ಲಿ ಕೃಷಿ ಮತ್ತು ಆಹಾರ ಸಂಸ್ಕರಣಾ ಕ್ಷೇತ್ರದ ಪ್ರಮುಖ ತಜ್ಞರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಹಣಕಾಸು ಕಾರ್ಯದರ್ಶಿ ಡಾ.ಎ.ಬಿ. ಪಾಂಡೆ, ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ತರುಣ್ ಬಜಾಜ್ ಮತ್ತು ಮುಖ್ಯ ಆರ್ಥಿಕ ಸಲಹೆಗಾರ ಕೆ ವಿ ಸುಬ್ರಮಣಿಯನ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು.
ಈ ಹಿಂದೆ, ಸಚಿವೆ ಬಜೆಟ್ಗೆ ಸಂಬಂಧಿಸಿದಂತೆ ಮೂಲಸೌಕರ್ಯ, ಇಂಧನ ಮತ್ತು ಹವಾಮಾನ ಬದಲಾವಣೆ ಮತ್ತು ಹಣಕಾಸು ಮತ್ತು ಬಂಡವಾಳ ಮಾರುಕಟ್ಟೆಗಳ ತಜ್ಞರು, ಉನ್ನತ ಕೈಗಾರಿಕೋದ್ಯಮಿಗಳು, ಕೈಗಾರಿಕೆ ಮತ್ತು ವಾಣಿಜ್ಯ ಸಂಘಗಳು, ವ್ಯಾಪಾರ ಸಂಸ್ಥೆಗಳು ಮತ್ತು ಇತರರೊಂದಿಗೆ ಸಭೆ ನಡೆಸಿ, ಕೇಂದ್ರ ಬಜೆಟ್ ಕುರಿತು ವಿಚಾರ ಮಂಥನ ನಡೆಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.