ಜಮ್ಮು: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಕೇಂದ್ರ ಸರ್ಕಾರವು ಅಭಿವೃದ್ಧಿ, ಶಾಂತಿ ಮತ್ತು ಸ್ಥಿರತೆಗೆ ಪ್ರಮುಖ ಒತ್ತು ನೀಡುತ್ತಿದೆ. ಇದಕ್ಕಾಗಿ ಮುಂದಿನ ಮೂರು ವರ್ಷಗಳಲ್ಲಿ 30,000 ಕೋಟಿ ರೂ. ಹೂಡಿಕೆ ಮಾಡಲು ನಿರ್ಧರಿಸಿದೆ ಕಣಿವೆಯ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು, ಹೊಸದಾಗಿ ರಚಿಸಲಾದ ಕೇಂದ್ರಾಡಳಿತ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಬೃಹತ್ ಆರ್ಥಿಕ ಪ್ಯಾಕೇಜ್ ಅನ್ನು ಕೇಂದ್ರ ಸಿದ್ಧಪಡಿಸುತ್ತಿದೆ ಎಂದು ಹೇಳಿದ್ದಾರೆ.
ಕೇಂದ್ರವು ಜಮ್ಮು-ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿ ಅದನ್ನು ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತಿಸಿದ ನಂತರ ಅಲ್ಲಿ ಸಾಕಷ್ಟು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಬದಲಾವಣೆಗಳು ನಡೆದಿವೆ ಎಂದು ಸಿನ್ಹಾ ಹೇಳಿದ್ದಾರೆ.
ಜಮ್ಮು- ಕಾಶ್ಮೀರವು ಕೇವಲ ಪ್ರಕೃತಿಯ ಕಾರಣದಿಂದ ಮಾತ್ರ ಸುಂದರವಾಗಿಲ್ಲ ಅಲ್ಲಿನ ನಿವಾಸಿಗಳು ಅತ್ಯಂತ ಪ್ರತಿಭಾವಂತರು ಎಂದಿರುವ ಸಿನ್ಹಾ, ಅಪಾರ ಸಾಮರ್ಥ್ಯದ ಹೊರತಾಗಿಯೂ ಹೊರಗಿನ ಜನರಿಗೆ ಇಲ್ಲಿನ ಪ್ರಪಂಚಕ್ಕೆ ಮುಕ್ತ ಪ್ರವೇಶವಿರಲಿಲ್ಲ. ಈಗ ಇಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಮತ್ತು ಜನರು ತಮ್ಮ ಸುಧಾರಣೆಗಳನ್ನು ಒಪ್ಪಿಕೊಳ್ಳಲು ಪ್ರಾರಂಭಿಸಿದ್ದಾರೆ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಜೆಟ್ ಇತರ ರಾಜ್ಯಗಳಿಗಿಂತ ಹೆಚ್ಚಾಗಿದೆ ಮತ್ತು ಕಾಲಕಾಲಕ್ಕೆ ಕೇಂದ್ರ ಸರ್ಕಾರವು ಇಲ್ಲಿಗೆ ಸಾಕಷ್ಟು ಆರ್ಥಿಕ ಸಹಾಯವನ್ನು ನೀಡಿದೆ. ಆದರೆ ಇಲ್ಲಿನ ಸ್ಥಳೀಯರಿಗೆ ಇದರ ಪ್ರಯೋಜನ ಸಿಗಲಿಲ್ಲ. ಕೈಗಾರಿಕೆಗಳ ಕೊರತೆಯಿಂದಾಗಿ, ಸ್ಥಳೀಯರು ಸರ್ಕಾರಿ ಉದ್ಯೋಗಗಳ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರವನ್ನು ದೇಶದ ಇತರ ಭಾಗಗಳಂತೆಯೇ ಒಂದೇ ವೇಗದಲ್ಲಿ ಅಭಿವೃದ್ಧಿಪಡಿಸಲು ಸಾಧ್ಯವಾಗಲಿಲ್ಲ ಎಂಬುದು ವಿಷಾದನೀಯ. ಇನ್ನು ಮುಂದೆ ಹಾಗಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.