ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಬೆಳಿಗ್ಗೆ ಶಾಂತಿನಿಕೇತನ ವಿಶ್ವ-ಭಾರತಿ ವಿಶ್ವವಿದ್ಯಾಲಯದ ಶತಮಾನೋತ್ಸವವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಲಿದ್ದಾರೆ.
ಪ್ರಧಾನಿಯವರು ಈ ವಿಶ್ವವಿದ್ಯಾಲಯದ ಚಾನ್ಸೆಲರ್ ಆಗಿದ್ದಾರೆ.
ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್ ಮತ್ತು ಕೇಂದ್ರ ಶಿಕ್ಷಣ ಸಚಿವರು ಶತಮಾನೋತ್ಸವ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
1921ರಲ್ಲಿ ಗುರುದೇವ್ ರವೀಂದ್ರನಾಥ ಟ್ಯಾಗೋರ್ ಅವರು ಸ್ಥಾಪಿಸಿದ ವಿಶ್ವ-ಭಾರತಿಯನ್ನು 1951 ರ ಮೇನಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ಕೇಂದ್ರ ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ ಎಂದು ಘೋಷಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.