ನವದೆಹಲಿ: ಹೊಸ ಕೃಷಿ ಕಾನೂನುಗಳಿಗೆ ಬೆಂಬಲ ನೀಡುತ್ತಿರುವ ರೈತರ ಪಟ್ಟಿಯನ್ನು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬಿಡುಗಡೆ ಮಾಡಿದ್ದಾರೆ. 3 ಲಕ್ಷಕ್ಕೂ ಹೆಚ್ಚು ರೈತರ ಸಹಿಯನ್ನು ಇದು ಒಳಗೊಂಡಿದೆ.
ಗ್ರಾಮೀಣ ಭಾರತದ ಎನ್ಜಿಒಗಳ ಒಕ್ಕೂಟವು 3 ಲಕ್ಷ 13 ಸಾವಿರಕ್ಕೂ ಹೆಚ್ಚು ರೈತರ ಸಹಿಗಳನ್ನು ಹೊಂದಿರುವ ಜ್ಞಾಪಕ ಪತ್ರವನ್ನು ನವದೆಹಲಿಯಲ್ಲಿ ತೋಮರ್ ಅವರಿಗೆ ನಿನ್ನೆ ಹಸ್ತಾಂತರಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ತೋಮರ್, “ಹೊಸ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರಾಷ್ಟ್ರದಾದ್ಯಂತದ ರೈತರಲ್ಲಿ ಬಹಳ ಉತ್ಸಾಹವಿದೆ. ಈ ಸುಧಾರಣೆಗಳು ಬಹಳ ಸಮಯದಿಂದ ಬಾಕಿ ಉಳಿದಿದ್ದವು. ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪದಿಂದಾಗಿ ಅಗತ್ಯ ಸುಧಾರಣೆಗಳು ಈಗ ರೂಪುಗೊಳ್ಳುವುದನ್ನು ನಾವು ಕಾಣುತ್ತಿದ್ದೇವೆ” ಎಂದು ತೋಮರ್ ಹೇಳಿದ್ದಾರೆ.
ಗ್ರಾಮೀಣ ಕೃಷಿ ಆರ್ಥಿಕತೆಯನ್ನು ಸಶಕ್ತಗೊಳಿಸುವುದು ಸರ್ಕಾರದ ಕರ್ತವ್ಯ ಮತ್ತು ಭವಿಷ್ಯದಲ್ಲಿ ಹಾಗೆಯೇ ಮುಂದುವರಿಯುತ್ತದೆ ಎಂದು ಅವರು ಹೇಳಿದರು.
ಕಳೆದ ಆರು ವರ್ಷಗಳಲ್ಲಿ ಹಲವಾರು ಪ್ರಮುಖ ಕೃಷಿ ಸುಧಾರಣಾ ಕಾರ್ಯಗಳು ನಡೆದಿವೆ ಮತ್ತು ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ತಜ್ಞರು ಇಂತಹ ಸುಧಾರಣೆಗಳನ್ನು ಯಾವಾಗಲೂ ಶಿಫಾರಸು ಮಾಡುತ್ತಾರೆ ಎಂದು ಸಚಿವರು ಹೇಳಿದರು.
ಈ ಸುಧಾರಣೆಗಳ ಗುರಿ ರೈತರ ಆದಾಯವನ್ನು ಹೆಚ್ಚಿಸುವುದು, ಅವರಿಗೆ ಸ್ವತಂತ್ರ ಮಾರುಕಟ್ಟೆ ಒದಗಿಸುವುದು, ಯುವ ಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸುವುದು ಮತ್ತು ದೇಶದ ಜಿಡಿಪಿಯಲ್ಲಿ ಕೃಷಿಯ ಕೊಡುಗೆಯನ್ನು ಹೆಚ್ಚಿಸುವುದಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.