ಬೆಂಗಳೂರು: ಹೊರದೇಶದಿಂದ ರಾಜ್ಯಕ್ಕೆ ಆಗಮಿಸುವವರಿಗೆ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ, ಬಂದರುಗಳಲ್ಲಿ ಕೊರೋನಾ ಮಾದರಿ ಪರೀಕ್ಷೆ ಆರ್ಟಿಪಿಸಿಆರ್ ನಡೆಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಬ್ರಿಟನ್ ದೇಶದಲ್ಲಿ ಕೊರೋನಾ ರೂಪಾಂತರ ವೈರಸ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿದೇಶದಿಂದ ಆಗಮಿಸುವವರ ಮೇಲೆ ಕಣ್ಣಿಡುವ ಮತ್ತು ಅವರ ಆರೋಗ್ಯದ ಮೇಲೆ ನಿಗಾ ವಹಿಸುವ ದೃಷ್ಟಿಯಿಂದ ಈ ಕ್ರಮ ಕೈಗೊಂಡಿರುವುದಾಗಿ ಸರ್ಕಾರ ಮಾಹಿತಿ ನೀಡಿದೆ. ಈ ನಿಟ್ಟಿನಲ್ಲಿ ಇಂದಿನಿಂದಲೇ ಈ ಮಾರ್ಗಸೂಚಿ ಹೊರಡಿಸಲಾಗಿದೆ.
ಕೊರೋನಾ ಟೆಸ್ಟ್ ಬಳಿಕ ವರದಿ ಬರುವ ವರೆಗೆ ಕಡ್ಡಾಯವಾಗಿ ಹೋಂ ಕ್ವಾರಂಟೈನ್ ನಲ್ಲಿರಬೇಕು. ಪ್ರಯಾಣಿಕರು ಕಡ್ಡಾಯವಾಗಿ ವಿಮಾನ ನಿಲ್ದಾಣದಲ್ಲಿ ಸರ್ಕಾರ ಒಳಪಡಿಸುವ ಕ್ಷಿಪ್ರ ಪರೀಕ್ಷೆಗೆ ಒಳಪಡಬಹುದಾಗಿದೆ. ಸೋಂಕು ದೃಢಪಟ್ಟಲ್ಲಿ, ವರದಿಯನ್ನು ಸೋಂಕಿನ ಸ್ವರೂಪ ತಿಳಿಯಲು ನಿಮ್ಹಾನ್ಸ್ ಗೆ ಕಳುಹಿಸಬೇಕು. ಜೊತೆಗೆ 28 ದಿನಗಳ ಕಾಲ ಕ್ವಾರಂಟೈನ್ಗೆ ಒಳಪಡುವಂತೆ ತಿಳಿಸಲಾಗಿದೆ.
ಯುನೈಟೆಡ್ ಕಿಂಗ್ಡಮ್ ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಮಾರ್ಗಸೂಚಿಗಳು.@PMOIndia @narendramodi @CMofKarnataka @MoHFW_INDIA @drharshvardhan @BSYBJP @nalinkateel @drashwathcn @mla_sudhakar @siddaramaiah @hd_kumaraswamy pic.twitter.com/rk9y2Yo8sN
— K’taka Health Dept (@DHFWKA) December 23, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.