ನವದೆಹಲಿ: ಸಿಂಘು ಗಡಿಯಲ್ಲಿ ರೈತರ ಪ್ರತಿಭಟನೆ 28 ನೇ ದಿನಕ್ಕೆ ಕಾಲಿಟ್ಟಿರುವ ಈ ಸಂದರ್ಭದಲ್ಲಿ, ಕೃಷಿ ಕಾನೂನುಗಳನ್ನು ಬೆಂಬಲಿಸಿ ಪಶ್ಚಿಮ ಉತ್ತರ ಪ್ರದೇಶದ ರೈತ ಒಕ್ಕೂಟ ಕಿಸಾನ್ ಸೇನೆಯ ಸುಮಾರು 20,000 ಸದಸ್ಯರು ಗುರುವಾರ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಮಥುರಾ, ಆಗ್ರಾ, ಫಿರೋಜಾಬಾದ್, ಹತ್ರಾಸ್ ಮುಂತಾದ ಜಿಲ್ಲೆಗಳನ್ನು ಒಳಗೊಂಡಿರುವ ಬ್ರಜ್ ಪ್ರದೇಶದ ರೈತರು ಈ ಮೆರವಣಿಗೆಯಲ್ಲಿ ಸೇರ್ಪಡೆಗೊಳ್ಳಲಿದ್ದಾರೆ ಮತ್ತು ಪಶ್ಚಿಮ ಯುಪಿಯ ಮೀರತ್ ಮತ್ತು ಮುಜಫರ್ ನಗರದ ಬೆಂಬಲಿಗರು ಕೂಡ ಸೇರಲಿದ್ದಾರೆ ಎಂದು ಯೂನಿಯನ್ ಹೇಳಿದೆ.
“ದೆಹಲಿಗೆ ನಮ್ಮ ಮೆರವಣಿಗೆಗೆ ಸಂಬಂಧಿಸಿದಂತೆ ನಾವು ಅನುಮತಿಗಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದಿದ್ದೇವೆ ಆದರೆ ಉತ್ತರ ಸಿಕ್ಕಿಲ್ಲ. ಏನೇ ಇರಲಿ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಲು ಕಿಸಾನ್ ಸೇನಾ ಬೆಂಬಲಿಗರಲ್ಲಿ ಸುಮಾರು 20,000 ಮಂದಿ ದೆಹಲಿಗೆ ತೆರಳಲಿದ್ದಾರೆ” ಎಂದು ಕಿಸಾನ್ ಸೇನಾ ಮುಖಂಡ ಠಾಕೂರ್ ಗೌರಿ ಶಂಕರ್ ಸಿಂಗ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಪಂಜಾಬ್ ಮತ್ತು ಹರಿಯಾಣದ ಇತರ ಒಕ್ಕೂಟಗಳು ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ರೈತರು ಇದ್ದಾರೆ ಎಂಬುದರಲ್ಲಿ ಸಂಶಯವಿಲ್ಲ ಆದರೆ ಅವರು ಸಂಪೂರ್ಣ ಭಾರತ ಅಥವಾ ಯುಪಿಯಂತಹ ಇತರ ರಾಜ್ಯಗಳ ರೈತರನ್ನು ಪ್ರತಿನಿಧಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.