ನವದೆಹಲಿ: ಶಾಂತಿ ನಿಕೇತನದ ವಿಶ್ವ ಭಾರತಿ ವಿಶ್ವವಿದ್ಯಾಲಯ ಶತಮಾನೋತ್ಸವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅವರು, ಭಾರತದ ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಸ್ಥಾಪಿತವಾದ ವಿಶ್ವ ಭಾರತಿ ವಿಶ್ವವಿದ್ಯಾಲಯ, ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು), ಜಾಮಿಯಾ ಮಿಲಿಯಾ ಇಸ್ಲಾಮಿಯಾ, ದೆಹಲಿ ವಿಶ್ವವಿದ್ಯಾಲಯ ಮುಂತಾದ ಶಿಕ್ಷಣ ಸಂಸ್ಥೆಗಳ ಪಾತ್ರದ ಕುರಿತು ಬಣ್ಣಿಸಿದರು.
“ನಾವು ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವಾಗ, 19-20 ಶತಮಾನದ ಕಲ್ಪನೆ ನೇರವಾಗಿ ನಮ್ಮ ಮನಸ್ಸಿಗೆ ಬರುತ್ತದೆ. ಆದರೆ ಈ ಹೋರಾಟಕ್ಕೆ ಅಡಿಪಾಯವನ್ನು ತುಂಬಾ ಹಿಂದೆಯೇ ಹಾಕಲಾಗಿತ್ತು ಎಂಬುದು ಸಹ ಅಷ್ಟೇ ಸತ್ಯ. ಭಾರತದ ಸ್ವಾತಂತ್ರ್ಯ ಚಳವಳಿಗೆ ಶತಮಾನಗಳಿಂದಲೂ ನಡೆಯುತ್ತಿದ್ದ ಅನೇಕ ಚಳುವಳಿಗಳಿಂದ ಶಕ್ತಿ ಸಿಕ್ಕಿತು” ಎಂದು ಅವರು ಹೇಳಿದರು.
“ಭಕ್ತಿ ಚಳುವಳಿ ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಐಕ್ಯತೆಯನ್ನು ಬಲಪಡಿಸಿತು. ಭಕ್ತಿ ಯುಗದಲ್ಲಿ, ಭಾರತದ ಪ್ರತಿಯೊಂದು ಪ್ರದೇಶ, ಪ್ರತಿಯೊಂದು ಜಾಗ, ಪೂರ್ವ-ಪಶ್ಚಿಮ-ಉತ್ತರ-ದಕ್ಷಿಣ ಎಲ್ಲದರಲ್ಲೂ ನಮ್ಮ ಸಂತರು, ಮಹಂತರು, ಆಚಾರ್ಯರು ರಾಷ್ಟ್ರ ಪ್ರಜ್ಞೆಯನ್ನು ಜನರಲ್ಲಿ ಜಾಗೃತವಾಗಿರಿಸಲು ಪ್ರಯತ್ನಿಸಿದರು” ಎಂದು ಪ್ರಧಾನಿ ಮೋದಿ ಹೇಳಿದರು.
ಸ್ವಾತಂತ್ರ್ಯ ಸಂಗ್ರಾಮವನ್ನು ಗೆಲ್ಲಲು ಸೈದ್ಧಾಂತಿಕ ಆಂದೋಲನವನ್ನು ರಚಿಸುವುದು ಮತ್ತು ಅದೇ ಸಮಯದಲ್ಲಿ ಪ್ರಕಾಶಮಾನವಾದ ಭಾರತದ ಸೃಷ್ಟಿಗೆ ಹೊಸ ಪೀಳಿಗೆಯನ್ನು ಸಿದ್ಧಪಡಿಸುವುದು ಸಮಯದ ಅಗತ್ಯವಾಗಿತ್ತು ಎಂದು ಪ್ರಧಾನಿ ಹೇಳಿದರು. ಅನೇಕ ಪ್ರತಿಷ್ಠಿತ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ಈ ಅಂಶದಲ್ಲಿ ದೊಡ್ಡ ಪಾತ್ರವಹಿಸಿವೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.