ಬೆಳಗಾವಿ: ಭಾರತದ ಹೆಮ್ಮೆಯಾಗಿರುವ ಭಾರತೀಯ ಸೇನೆಯ ಸಾಧನೆಯನ್ನು ಸಾರ್ವಜನಿಕರಿಗೆ ತಿಳಿಸಲು ನಗರದ ಕೇಂದ್ರ ಭಾಗವಾಗಿರುವ ರೈಲು ನಿಲ್ದಾಣ ಸಮೀಪದಲ್ಲಿ ಸೈನಿಕರ ಸ್ಮಾರಕವನ್ನು 1.50 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲಾಗುವುದು. ಈ ಕೆಲಸ ಈಗಾಗಲೇ ಆರಂಭವಾಗಿದೆ.
ಈ ಸಂಬಂಧ ಈಗಾಗಲೇ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಉದ್ಯಾನವನ್ನು ಸ್ವಚ್ಛಗೊಳಿಸಿ ಅಲ್ಲಿ ಈ ಸ್ಮಾರಕ ನಿರ್ಮಾಣ ಕಾರ್ಯ ಆರಂಭಿಸಲಾಗಿದೆ. ಇದರ ಉಸ್ತುವಾರಿಯನ್ನು ಬಿಜೆಪಿ ಶಾಸಕ ಅನಿಲ ಬೆನಕೆ ಅವರು ವಹಿಸಿಕೊಂಡಿದ್ದಾರೆ. ಇದಕ್ಕಾಗಿ ದಂಡು ಸಾಮಾನ್ಯ ಸಭೆಯಲ್ಲಿ ಅನುಮತಿಯನ್ನು ಸಹ ಪಡೆಯಲಾಗಿದ್ದು, ನಗರವನ್ನು ಆಕರ್ಷಕ ಪ್ರವಾಸಿ ತಾಣವಾಗಿಸುವ ಹಿನ್ನೆಲೆಯಲ್ಲಿ ಈ ಕಾರ್ಯವನ್ನು ಮುತುವರ್ಜಿ ವಹಿಸಿ ಮಾಡಲಾಗುತ್ತಿದೆ.
ಬೆಳಗಾವಿಯ ವಿಚಾರದಲ್ಲಿ ಭಾರತೀಯ ಸೇನೆ ಮಹತ್ವ ಪಡೆದಿದೆ. ಮರಾಠ ಲಘು ಪದಾತಿ ದಳ, ಏರ್ಮನ್ ತರಬೇತಿ ಶಾಲೆ, ಕಮಾಂಡೋ ತರಬೇತಿ ಕೇಂದ್ರಗಳಲ್ಲಿ ಯುವ ಜನತೆಗೆ ಕಠಿಣ ತರಬೇತಿ ನೀಡಿ ಸೈನಿಕರನ್ನಾಗಿ ಸಜ್ಜುಗೊಳಿಸುವಲ್ಲಿ ಬೆಳಗಾವಿ ಹೆಸರು ಪಡೆದಿದೆ. ಇಲ್ಲಿ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಈಗಾಗಲೇ ಅಧಿಕಾರಿಗಳ ಜೊತೆಗೂ ಮಾತುಕತೆ ನಡೆಸಲಾಗಿದೆ. ಇಲ್ಲಿ ವಾಯುಸೇನೆಯ ಯುದ್ಧ ವಿಮಾನ, ಭೂಸೇನೆಯ 2 ಟ್ಯಾಂಕರ್ಗಳು, ನೌಕಾಪಡೆಯ ಯುದ್ಧ ನೌಕೆಗಳನ್ನು ತರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯುವಜನರನ್ನು ಸೈನ್ಯದತ್ತ ಆಕರ್ಷಿಸುವ ನಿಟ್ಟಿನಲ್ಲಿ ಈ ಯೋಜನೆ ಆರಂಭಿಸಲಾಗಿದೆ. ಜೊತೆಗೆ ಇದು ರಾಜ್ಯದ ಪ್ರವಾಸಿಗರ ಜೊತೆಗೆ ಗೋವಾ, ಮಹಾರಾಷ್ಟ್ರದ ಪ್ರವಾಸಿಗರನ್ನು ಆಕರ್ಷಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.