ನವದೆಹಲಿ: ಪುದುಚೇರಿಯಲ್ಲಿ ಪಂಚಾಯತ್ ಚುನಾವಣೆ ನಡೆಸದಿರುವ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆ ಯಶಸ್ವಿಯಾಗಿ ಪೂರ್ಣಗೊಂಡಿರುವುದನ್ನು ಶ್ಲಾಘಿಸಿದ ಅವರು, ಡಿಡಿಸಿ ಚುನಾವಣೆಯ ಭಿನ್ನಾಭಿಪ್ರಾಯದಿಂದಾಗಿ ಬಿಜೆಪಿ ಕಣಿವೆಯಲ್ಲಿ ಒಂದು ಪಕ್ಷದೊಂದಿಗಿನ ಮೈತ್ರಿಯನ್ನು ಮುರಿದುಕೊಂಡಿತು ಎಂದು ಹೇಳಿದರು.
ಕಾಂಗ್ರೆಸ್ ಅಧಿಕಾರದಲ್ಲಿರುವ ಪುದುಚೇರಿಯ ಸ್ಥಿತಿಯನ್ನು ಉಲ್ಲೇಖಿಸಿ ಮೋದಿ, 370 ನೇ ವಿಧಿಯನ್ನು ರದ್ದುಪಡಿಸಿದ ಒಂದು ವರ್ಷದೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾನ ನಡೆಯುವಂತೆ ಬಿಜೆಪಿ ಸರ್ಕಾರ ಖಚಿತಪಡಿಸಿದೆ, ಆದರೆ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಪುದುಚೇರಿಯಲ್ಲಿ ಪಂಚಾಯತ್ ಅಥವಾ ಪುರಸಭೆ ಚುನಾವಣೆಗೆ ಅವಕಾಶ ನೀಡುತ್ತಿಲ್ಲ. ಹಲವು ವರ್ಷಗಳಿಂದ ಅಲ್ಲಿ ಚುನಾವಣೆಯೇ ನಡೆದಿಲ್ಲ ಎಂದು ಹರಿಹಾಯ್ದರು.
“ಜಿಲ್ಲಾ ಅಭಿವೃದ್ಧಿ ಚುನಾವಣೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಅಧ್ಯಾಯವನ್ನು ತೆರೆದಿವೆ. ಜಮ್ಮು ಮತ್ತು ಕಾಶ್ಮೀರದ ಪ್ರತಿಯೊಬ್ಬ ಮತದಾರರ ದೃಷ್ಟಿಯಲ್ಲಿ ನಾನು ಭರವಸೆಯನ್ನು ಕಂಡಿದ್ದೇನೆ. ಡಿಡಿಸಿ ಚುನಾವಣೆಯ ಈ ಪ್ರಕ್ರಿಯೆಯಿಂದ ಕಣಿವೆಯ ಜನರು ಪ್ರಜಾಪ್ರಭುತ್ವವನ್ನು ಬಲಪಡಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಆಡಳಿತವನ್ನು ಇದಕ್ಕಾಗಿ ಅಭಿನಂದಿಸಲು ಬಯಸುತ್ತೇನೆ. ಇದು ಮಹಾತ್ಮ ಗಾಂಧಿಯವರ ಕನಸಿನತ್ತ ಒಂದು ಹೆಜ್ಜೆ” ಎಂದಿದ್ದಾರೆ.
“ದೆಹಲಿಯಲ್ಲಿ ಕೆಲವರು ಮೋದಿಯನ್ನು ಟೀಕಿಸುತ್ತಾರೆ. ಪ್ರತಿದಿನ ಅವರು ನನಗೆ ಪ್ರಜಾಪ್ರಭುತ್ವದ ಹೊಸ ಪಾಠವನ್ನು ಕಲಿಸಲು ಮುಂದಾಗುತ್ತಿದ್ದಾರೆ. ಪುದುಚೇರಿಯಲ್ಲಿ ಪಂಚಾಯತ್ ಮತ್ತು ಪುರಸಭೆ ಚುನಾವಣೆಗಳು ನಡೆಯುತ್ತಿಲ್ಲ ಎಂದು ನಾನು ಭಾರತದ ಜನರಿಗೆ ಹೇಳಲು ಬಯಸುತ್ತೇನೆ. ” ಎಂದು ಪಿಎಂ ಮೋದಿ ಕಾಂಗ್ರೆಸ್ ಪಕ್ಷವನ್ನು ದೂಷಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.