ನವದೆಹಲಿ: ಕತಾರ್ ಪ್ರವಾಸದಲ್ಲಿರುವ ಭಾರತೀಯ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಅಲ್ಲಿನ ವ್ಯಾಪಾರ ವ್ಯವಹಾರಗಳಿಗೆ ಸಂಬಂಧಿಸಿದಂತೆ ಇರುವ ನಾಯಕರನ್ನು ಭೇಟಿ ಮಾಡಿ ಭಾರತದಲ್ಲಿ ಹೂಡಿಕೆಗಳಿಗೆ ಇರುವ ಅವಕಾಶದ ಬಗ್ಗೆ ಮಾತುಕತೆ ನಡೆಸಿದರು.
ಕೊಲ್ಲಿ ರಾಷ್ಟ್ರಗಳ 2 ದಿನಗಳ ಪ್ರವಾಸದ ಹಿನ್ನೆಲೆಯಲ್ಲಿ ನಿನ್ನೆ ದೋಹಾಗೆ ತಲುಪಿರುವ ಸಚಿವರು, ಈ ಸಂದರ್ಭದಲ್ಲಿ ಭಾರತದಲ್ಲಿ ಉದ್ಯಮಗಳ ಆರಂಭಕ್ಕೆ ವಿದೇಶಗಳಿಗಿರುವ ಅವಕಾಶಗಳ ಬಗ್ಗೆ ಸಂಬಂಧಪಟ್ಟ ನಾಯಕರ ಜೊತೆಗೆ ಮಾತುಕತೆ ನಡೆಸಿದರು. ಎರಡೂ ದೇಶಗಳ ನಡುವಿನ ವ್ಯಾಪಾರ ಸಂಬಂಧದ ವೃದ್ಧಿಗೆ ಪೂರಕವಾಗಿ ಕೊಲ್ಲಿ ರಾಷ್ಟ್ರದ ನಾಯಕರ ಜೊತೆಗೆ ಚರ್ಚಿಸಿದರು.
ಭಾರತದಲ್ಲಿ ಆತ್ಮನಿರ್ಭರದ ಕಲ್ಪನೆ ಮತ್ತು ಉದ್ಯಮಗಳ ಆರಂಭಕ್ಕೆ ಇರುವ ಹೊಸ ಅವಕಾಶಗಳ ಬಗ್ಗೆ ಈ ಸಂದರ್ಭದಲ್ಲಿ ಅವರು ಮಾಹಿತಿ ನೀಡಿದರು. ಹಾಗೆಯೇ ಅಲ್ಲಿನ ಭಾರತೀಯ ಸಂಜಾತರನ್ನು ಕೊರೋನಾ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ, ಉತ್ತಮವಾಗಿ ನೋಡಿಕೊಂಡಿರುವುದಕ್ಕಾಗಿ ಜೈಶಂಕರ್ ಕತಾರ್ನ ನಾಯಕರಿಗೆ ಧನ್ಯವಾದ ಸಮರ್ಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.