News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜ. 1 ರಿಂದ 10 ಮತ್ತು 12 ನೇ ತರಗತಿ ಆರಂಭ: ಉಸ್ತುವಾರಿ ಸಚಿವರುಗಳಿಗೆ ಶಿಕ್ಷಣ ಸಚಿವರಿಂದ ಪತ್ರ

ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆ, ಮಾರ್ಗದರ್ಶನ‌ವನ್ನು ಪಡೆದುಕೊಂಡು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆಯಂತೆ ರಾಜ್ಯದಲ್ಲಿ 1 ಜನವರಿ 2021 ರಿಂದ ಎಸ್‌ಎಸ್‌ಎಲ್‌ಸಿ ಮತ್ತು 12 ನೇ ತರಗತಿ, ವಿದ್ಯಾಗಮ ಕಾರ್ಯಕ್ರಮ ಆರಂಭ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ರಾಜ್ಯದ ಎಲ್ಲಾ ವಿಧಾನ ಸಭೆಯ ಸದಸ್ಯರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಶಾಲಾರಂಭ‌ಕ್ಕೆ ಸಂಬಂಧಿಸಿದಂತೆ ಇಲಾಖೆಗಳ ಸಮನ್ವಯ ಅಧಿಕಾರಿಗಳಿಗೆ ಸೂಕ್ತ ಸಲಹೆ, ಸೂಚನೆ, ಮಾರ್ಗದರ್ಶನ, ಸಹಕಾರ ನೀಡುವಂತೆಯೂ ಸಚಿವರು ಮನವಿ ಮಾಡಿದ್ದಾರೆ.

ಮಕ್ಕಳ ಸುಲಲಿತ ವಿದ್ಯಾಭ್ಯಾಸ‌ದ ದೃಷ್ಟಿಯಿಂದ ಇಂತಹ ಕಾರ್ಯ‌ಕ್ರಮ‌ಗಳನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಂದರ್ಭದಲ್ಲಿ ನೀಡಿದ ಸಹಕಾರ‌ದಂತೆಯೇ ಶಾಲಾರಂಭದ ಸಂದರ್ಭದಲ್ಲಿ‌ಯೂ ಸಹಕಾರ ನೀಡುವಂತೆ ಸಚಿವರು ಮನವಿ ಮಾಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top