ಬೆಂಗಳೂರು: ಕೊರೋನಾ ರೂಪಾಂತರ ರಾಜ್ಯದಲ್ಲಿ ಹರಡದಂತೆ ತಡೆಯುವ ಸಲುವಾಗಿ ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಬ್ರಿಟನ್ನಿಂದ ರಾಜ್ಯಕ್ಕೆ ಆಗಮಿಸಿ, ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ನೀಡಿದ್ದಾರೆ.
ಬ್ರಿಟನ್ನಿಂದ ಆಗಮಿಸಿ ಸದ್ಯ ಕಾಣಿಸದೇ ಇರುವವರ ವಿರುದ್ಧ ಪೊಲೀಸ್ ಕ್ರಮವನ್ನು ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಅವರು ತಿಳಿಸಿದ್ದಾರೆ. ಆದ್ದರಿಂದ ತಕ್ಷಣವೇ ಬ್ರಿಟನ್ನಿಂದ ರಾಜ್ಯಕ್ಕಾಗಮಿಸಿದವರು ತಮ್ಮ ಸುಳಿವನ್ನು, ಇರುವಿಕೆಯನ್ನು ಸರ್ಕಾರದ ಗಮನಕ್ಕೆ ತರುವಂತೆಯೂ ಸುಧಾಕರ್ ತಿಳಿಸಿದ್ದಾರೆ. ಜವಾಬ್ದಾರಿಯುತ ನಾಗರಿಕರಾಗಿ ಬ್ರಿಟನ್ನಿಂದ ಹಿಂತಿರುಗಿದವರು ಸಹಕರಿಸುವಂತೆಯೂ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.
ಕೊರೋನಾ ಪರೀಕ್ಷೆಗೆ ಒಳಗಾಗಿ, ಕೊರೋನಾ ಇದೆಯೋ ಇಲ್ಲವೋ ಎಂಬುದನ್ನು ದೃಢ ಪಡಿಸಿಕೊಳ್ಳಬೇಕು. ತಪ್ಪಿದಲ್ಲಿ ಅದು ಅಪರಾಧವಾಗುತ್ತದೆ. ಬ್ರಿಟನ್ನಿಂದ ಆಗಮಿಸಿದ ಹಲವು ಮಂದಿ ಫೋನ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದಾರೆ. ಸರ್ಕಾರ ಮನವಿ ಮಾಡುತ್ತಿದ್ದರೂ ಅಲಕ್ಷ್ಯ ಮಾಡುವುದು ಸರಿಯಲ್ಲ. ಈ ಸಂಬಂಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆಗೆ ಮಾತನಾಡಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸುಧಾಕರ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.