ಬೆಂಗಳೂರು: ರಾಜ್ಯದಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಕ್ರಮದ ಬಗ್ಗೆ ಮಾಹಿತಿಯನ್ನು ನೀಡಲು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯವೈಖರಿ ತಿಳಿಸಲು ಕೆಎಸ್ಪಿಸಿಬಿ ಆ್ಯಪ್ ಪರಿಚಯಿಸಲು ಮುಂದಾಗಿದೆ. ಒಂದೇ ವೇದಿಕೆಯಲ್ಲಿ ಎಲ್ಲಾ ವಿಚಾರಗಳು ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಈ ಕ್ರಮಕ್ಕೆ ಮುಂದಾಗಿದೆ.
ಗಾಳಿ ಸೂಚ್ಯಂಕ ಗುಣಮಟ್ಟದ ಮಾಪನ, ಮಂಡಳಿಯ ಕಾಯ್ದೆ, ನಿಯಮ, ಸುತ್ತೋಲೆ, ಅಧಿಕಾರಿಗಳ ವಿವರ, ದೂರು ಮತ್ತು ಸಲಹೆಗಳ ಮೂಲಕ ಮಂಡಳಿಯ ಮತ್ತು ಸಾರ್ವಜನಿಕರ ನಡುವೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಈ ಆ್ಯಪ್ ಮಹತ್ವ ಪಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಹೊಸ ಆ್ಯಪ್ ನ ಮುಖಾಂತರ ಕೈಗಾರಿಕೆಗಳ ಮಾಲಿಕರು ಮತ್ತು ಸಾರ್ವಜನಿಕರ ನಡುವೆ ಸಂಪರ್ಕ ಸಾಧಿಸಲು ಸಾಧ್ಯವಾಗಲಿದೆ. ರಾಜ್ಯದಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಉದ್ದಿಮೆಗಳು ರಾಜ್ಯದ ಮಾಲಿನ್ಯ ನಿಯಂತ್ರಣ ಮಂಡಳಿಯ ವ್ಯವಸ್ಥೆಯೊಳಕ್ಕೆ ಬರುತ್ತದೆ. ಈ ಆ್ಯಪ್ ಅಭಿವೃದ್ಧಿ ಮಾಡಲು ಜಿಪಿಎಸ್ ತಂತ್ರಜ್ಞಾನ ಬಳಕೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.