ಬೆಂಗಳೂರು: ಬ್ರಿಟನ್ನಿಂದ ರಾಜ್ಯಕ್ಕೆ ಆಗಮಿಸಿದ ಮೂವರು ಪ್ರಯಾಣಿಕರಿಗೆ ಕೊರೋನಾ ರೂಪಾಂತರ ದೃಢಪಟ್ಟಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರನ್ನು ಸಂಪರ್ಕ ಮಾಡಿರುವವರ ಆರೋಗ್ಯದ ಮೇಲೆಯೂ ನಿಗಾ ವಹಿಸಲಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಇಂಗ್ಲೆಂಡ್ನಿಂದ ಇಲ್ಲಿಗೆ ಆಗಮಿಸಿ ಕೊರೋನಾ ಮಾದರಿ ಪರೀಕ್ಷೆಯಲ್ಲಿ ಪಾಸಿಟಿವ್ ಬಂದವರ ವಂಶವಾಹಿನಿ ಪರೀಕ್ಷೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಬೆಂಗಳೂರಿನ ತಾಯಿ-ಮಗು ಸೇರಿದಂತೆ ಮೂವರಲ್ಲಿ ಕೊರೋನಾ ರೂಪಾಂತರ ದೃಢಪಟ್ಟಿದೆ. ಹಾಗೆಯೇ ಕೊರೋನಾ ಪಾಸಿಟಿವ್ ಬಂದ 26 ಪ್ರಯಾಣಿಕರನ್ನು ಐಸೋಲೇಶನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 28 ದಿನಗಳ ಕಾಲ ಇವರನ್ನು ಐಸೋಲೇಶನ್ ಪ್ರಕ್ರಿಯೆಗೆ ಒಳಪಡಿಸಲಿರುವುದಾಗಿಯೂ ಸುಧಾಕರ್ ಮಾಹಿತಿ ನೀಡಿದ್ದಾರೆ.
ಐಸೋಲೇಶನ್ಗೆ ಒಳಪಟ್ಟವರ ಪ್ರಾಥಮಿಕ, ದ್ವಿತೀಯ ಸಂಪರ್ಕ ಪತ್ತೆ ಮಾಡಿ, ಅವರ ಆರೋಗ್ಯದ ಮೇಲೆಯೂ ನಿಗಾ ವಹಿಸಲಾಗಿದೆ. ವಿಮಾನದಲ್ಲಿ ಅವರೊಂದಿಗೆ ಪ್ರಯಾಣಿಸಿದ್ದವರನ್ನೂ ಗುರುತಿಸಿ, ಅವರನ್ನು ಸಹ ಪರೀಕ್ಷೆಗೆ ಒಳಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಹಾಗೆಯೇ ಸೋಂಕು ತಡೆಯಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಸುಧಾಕರ್ ಹೇಳಿದ್ದಾರೆ. ಲಾಕ್ಡೌನ್, ಸೀಲ್ಡೌನ್ ಮಾಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಕೊರೊನಾ ವೈರಾಣುವಿನ ರೂಪಾಂತರಗೊಂಡ ಪ್ರಬೇಧವನ್ನು ಪತ್ತೆ ಮಾಡಲು ಯು.ಕೆ.ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದ್ದು. ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು.
— Dr Sudhakar K (@mla_sudhakar) December 29, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.